<p>ಯಮಕನಮರಡಿ (ಬೆಳಗಾವಿ): ‘ಹಿಂದೂ ಎನ್ನುವುದು ಜಗತ್ತಿನ ಪ್ರಾಚೀನ ಸಂಸ್ಕೃತಿ ಎಂದು ಡಾ.ಅಂಬೇಡ್ಕರ್ ಅವರೇ ಹೇಳಿದ್ದಾರೆ. ಅವರ ಹೆಸರು ಹೇಳಿಕೊಂಡು ಬೆಳೆದವರು ಅರ್ಥ ಮಾಡಿಕೊಳ್ಳಿ’ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.</p>.<p>ಇಲ್ಲಿ ಬುಧವಾರ ಆಯೋಜಿಸಿದ್ದ ‘ನಾನೂ ಹಿಂದೂ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮವನ್ನು ನುಂಗಬೇಕು ಎಂದು ಬಂದಿದ್ದ ರಾಕ್ಷಸರಾಜ ರಾವಣ,ಕಂಸರನ್ನು ಈ ಧರ್ಮವೇ ನುಂಗಿದೆ. ಘೋರಿ- ಘಜನಿಯಂಥ ಆಕ್ರಮಿಗಳನ್ನು ನುಂಗಿದೆ. ಬಾಬರ್ನಿಂದ ಹಿಡಿದು ಔರಂಗಜೇಬನ ವರೆಗೆ ಟಿಪ್ಪು ಸುಲ್ತಾನನಿಂದ ಹಿಡಿದು ಹಜರತನವರೆಗೆ ಎಲ್ಲರನ್ನೂ ಹಿಂದೂ ಧರ್ಮ ಹೊಸಕಿಹಾಕಿದೆ. ಇನ್ನು ಈ ಕೊತವಾಲಗಳು, ಸಾವಕಾರಗಳು ಯಾವ ಲೆಕ್ಕ’ ಎಂದರು.</p>.<p>‘ಈಗೀಗ ಚರ್ಚ್ಗಳ ಮುಂದೆ ಗರುಡ ಗಂಬಗಳು ಬಂದಿವೆ. ಉರುಳು ಸೇವೆ, ಜಾತ್ರೆ ಆರಂಭಿಸುವ ಮೂಲಕ ಸ್ವತಃ ಚರ್ಚ್ಗಳು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುತ್ತಿವೆ’ ಎಂದರು.</p>.<p>ಹಿರೇಹಡಗಲಿಯ ಹಾಲಸಂಸ್ಥಾನ ಮಠದ ಅಭಿನವ ಹಾಲಸ್ವಾಮೀಜಿ, ಹುಕ್ಕೇರಿಯ ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ಅಷ್ಠಗಿ,<br />ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಶಶಿಕಾಂತ ನಾಯಕ್, ಬಿಜೆಪಿ ಚಿಕ್ಕೋಡಿ ಘಟಕ ಅಧ್ಯಕ್ಷ ಡಾ.ರಾಜೇಶ್ ನೇರ್ಲಿ, ಎಸ್ಟಿ ಘಟಕ ಅಧ್ಯಕ್ಷ ಬಸವರಾಜ ಹುಂದ್ರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಮಕನಮರಡಿ (ಬೆಳಗಾವಿ): ‘ಹಿಂದೂ ಎನ್ನುವುದು ಜಗತ್ತಿನ ಪ್ರಾಚೀನ ಸಂಸ್ಕೃತಿ ಎಂದು ಡಾ.ಅಂಬೇಡ್ಕರ್ ಅವರೇ ಹೇಳಿದ್ದಾರೆ. ಅವರ ಹೆಸರು ಹೇಳಿಕೊಂಡು ಬೆಳೆದವರು ಅರ್ಥ ಮಾಡಿಕೊಳ್ಳಿ’ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.</p>.<p>ಇಲ್ಲಿ ಬುಧವಾರ ಆಯೋಜಿಸಿದ್ದ ‘ನಾನೂ ಹಿಂದೂ’ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂ ಧರ್ಮವನ್ನು ನುಂಗಬೇಕು ಎಂದು ಬಂದಿದ್ದ ರಾಕ್ಷಸರಾಜ ರಾವಣ,ಕಂಸರನ್ನು ಈ ಧರ್ಮವೇ ನುಂಗಿದೆ. ಘೋರಿ- ಘಜನಿಯಂಥ ಆಕ್ರಮಿಗಳನ್ನು ನುಂಗಿದೆ. ಬಾಬರ್ನಿಂದ ಹಿಡಿದು ಔರಂಗಜೇಬನ ವರೆಗೆ ಟಿಪ್ಪು ಸುಲ್ತಾನನಿಂದ ಹಿಡಿದು ಹಜರತನವರೆಗೆ ಎಲ್ಲರನ್ನೂ ಹಿಂದೂ ಧರ್ಮ ಹೊಸಕಿಹಾಕಿದೆ. ಇನ್ನು ಈ ಕೊತವಾಲಗಳು, ಸಾವಕಾರಗಳು ಯಾವ ಲೆಕ್ಕ’ ಎಂದರು.</p>.<p>‘ಈಗೀಗ ಚರ್ಚ್ಗಳ ಮುಂದೆ ಗರುಡ ಗಂಬಗಳು ಬಂದಿವೆ. ಉರುಳು ಸೇವೆ, ಜಾತ್ರೆ ಆರಂಭಿಸುವ ಮೂಲಕ ಸ್ವತಃ ಚರ್ಚ್ಗಳು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುತ್ತಿವೆ’ ಎಂದರು.</p>.<p>ಹಿರೇಹಡಗಲಿಯ ಹಾಲಸಂಸ್ಥಾನ ಮಠದ ಅಭಿನವ ಹಾಲಸ್ವಾಮೀಜಿ, ಹುಕ್ಕೇರಿಯ ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ಅಷ್ಠಗಿ,<br />ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಶಶಿಕಾಂತ ನಾಯಕ್, ಬಿಜೆಪಿ ಚಿಕ್ಕೋಡಿ ಘಟಕ ಅಧ್ಯಕ್ಷ ಡಾ.ರಾಜೇಶ್ ನೇರ್ಲಿ, ಎಸ್ಟಿ ಘಟಕ ಅಧ್ಯಕ್ಷ ಬಸವರಾಜ ಹುಂದ್ರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>