<p><strong>ಬೆಳಗಾವಿ</strong>: ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ ಎತ್ತಿದ್ದರು’ ಎಂಬ ಕಾರಣಕ್ಕೆ ಬೇಸರಗೊಂಡಿದ್ದ ಭರಮನಿ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಮುಂದಾಗಿದ್ದರು. ಅವರನ್ನು ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ ಸಮಾಧಾನ ಮಾಡಲು ಯತ್ನಿಸಿದ್ದರು.</p>.<p>ನಡೆದಿದ್ದೇನು?: ಏಪ್ರಿಲ್ 28ರಂದು ಕೆಪಿಸಿಸಿ ವತಿಯಿಂದ ಬೆಳಗಾವಿಯಲ್ಲಿ ‘ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಆಂದೋಲನ’ ಆಯೋಜಿಸಲಾಗಿತ್ತು. ಬೆಳಗಾವಿ ನಗರ ಪೊಲೀಸ್ ಆಯಕ್ತರು ರಜೆ ಇದ್ದ ಕಾರಣ ಭರಮನಿ ಅವರಿಗೆ ಭದ್ರತೆಯ ಉಸ್ತುವಾರಿ ವಹಿಸಲಾಗಿತ್ತು.</p>.<p>ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತೆಯರು ಅಡ್ಡಿಪಡಿಸಿದ್ದರು.<br>ಕಪ್ಪು ಬಾವುಟ ಪ್ರದರ್ಶಿಸಿದ್ದರು. ಅವ್ಯವಸ್ಥೆ ಉಂಟಾದ ಕಾರಣ ಸಿದ್ದರಾಮಯ್ಯ ಅವರು ಭದ್ರತೆ ನಿಗಾ ವಹಿಸಿದ್ದ ಪೊಲೀಸರ ಮೇಲೆ ಸಿಟ್ಟಿಗೆದ್ದಿದ್ದರು. ಆಗ ಭರಮನಿ ಅವರು ವೇದಿಕೆ ಏರಿ ಬಂದಾಗ, ‘ಏನು ಮಾಡುತ್ತಿದ್ದೀರಿ ನೀವೆಲ್ಲ’ ಎಂದು ಕೈ ಎತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ ಎತ್ತಿದ್ದರು’ ಎಂಬ ಕಾರಣಕ್ಕೆ ಬೇಸರಗೊಂಡಿದ್ದ ಭರಮನಿ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಮುಂದಾಗಿದ್ದರು. ಅವರನ್ನು ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ ಸಮಾಧಾನ ಮಾಡಲು ಯತ್ನಿಸಿದ್ದರು.</p>.<p>ನಡೆದಿದ್ದೇನು?: ಏಪ್ರಿಲ್ 28ರಂದು ಕೆಪಿಸಿಸಿ ವತಿಯಿಂದ ಬೆಳಗಾವಿಯಲ್ಲಿ ‘ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಆಂದೋಲನ’ ಆಯೋಜಿಸಲಾಗಿತ್ತು. ಬೆಳಗಾವಿ ನಗರ ಪೊಲೀಸ್ ಆಯಕ್ತರು ರಜೆ ಇದ್ದ ಕಾರಣ ಭರಮನಿ ಅವರಿಗೆ ಭದ್ರತೆಯ ಉಸ್ತುವಾರಿ ವಹಿಸಲಾಗಿತ್ತು.</p>.<p>ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತೆಯರು ಅಡ್ಡಿಪಡಿಸಿದ್ದರು.<br>ಕಪ್ಪು ಬಾವುಟ ಪ್ರದರ್ಶಿಸಿದ್ದರು. ಅವ್ಯವಸ್ಥೆ ಉಂಟಾದ ಕಾರಣ ಸಿದ್ದರಾಮಯ್ಯ ಅವರು ಭದ್ರತೆ ನಿಗಾ ವಹಿಸಿದ್ದ ಪೊಲೀಸರ ಮೇಲೆ ಸಿಟ್ಟಿಗೆದ್ದಿದ್ದರು. ಆಗ ಭರಮನಿ ಅವರು ವೇದಿಕೆ ಏರಿ ಬಂದಾಗ, ‘ಏನು ಮಾಡುತ್ತಿದ್ದೀರಿ ನೀವೆಲ್ಲ’ ಎಂದು ಕೈ ಎತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>