‘ಆಂದು ಕುಮಾರಗಂಧರ್ವ ಕಲಾಮಂದಿರದಲ್ಲಿ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ರಾಣಿ ಚನ್ನಮ್ಮ ವೃತ್ತದಿಂದ ಕಲಾಮಂದಿರದವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಪ್ರಾದೇಶಿಕ ಆಯುಕ್ತರು, ಜಿಲ್ಲಾ ನ್ಯಾಯಾಧೀಶರು, ಉತ್ತರ ವಲಯ ಐಜಿಪಿ, ನಗರ ಪೊಲೀಸ್ ಆಯುಕ್ತರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಜ. 24ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞೆ ಬೋಧಿಸಬೇಕು’ ಎಂದು ತಿಳಿಸಿದರು.