<p><strong>ಉಗರಗೋಳ</strong>: ನವರಾತ್ರಿಯ 5ನೇ ದಿನವಾದ ಸೋಮವಾರ ಸುಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ನಾನಾ ಭಾಗಗಳಿಂದ ಭಕ್ತಸಾಗರವೇ ಹರಿದು ಬಂದಿತ್ತು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮೊಳಗಿತು.</p>.<p>ತಂಪಾದ ವಾತಾವರಣ ಮತ್ತು ಆಗಾಗ ಬೀಳುತ್ತಿದ್ದ ಮಳೆಯ ನಡುವೆಯೂ ಭಕ್ತರು ಸರದಿ ಸಾಲಿನಲ್ಲಿ ಬಂದು ಯಲ್ಲಮ್ಮ ದೇವಿಯ ದರ್ಶನ ಪಡೆದರು.</p>.<p>ಕೋವಿಡ್ ಭೀತಿ ನಡುವೆಯೂ ಏಳುಕೊಳ್ಳದ ನಾಡಿನಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯುತ್ತಿದೆ. ಕರ್ನಾಟಕದೊಂದಿಗೆ, ಗೋವಾ, ತಮಿಳನಾಡು, ಆಂಧ್ರ ಮತ್ತು ನೆರೆಯ ಮಹಾತಾಷ್ಟ್ರದಿಂದಲೂ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಬಂದು ದರ್ಶನಾಶೀರ್ವಾದ ಪಡೆಯುತ್ತಿದ್ದಾರೆ. ಹಲವು ಭಕ್ತರು ಭಾನುವಾರ ರಾತ್ರಿಯೇ ಯಲ್ಲಮ್ಮನಗುಡ್ಡಕ್ಕೆ ಬಂದಿದ್ದರು.</p>.<p>ಸೋಮವಾರ ಬೆಳಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಿ, ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಲಾಯಿತು.</p>.<p>ನವರಾತ್ರಿ ವೇಳೆ ಯಲ್ಲಮ್ಮನಗುಡ್ಡಕ್ಕೆ ಬರುವ ಪ್ರತಿ ಭಕ್ತರು ದೀಪಕ್ಕೆ ಎಣ್ಣೆ ಹಾಕುವ ಪದ್ಧತಿ ರೂಢಿಯಲ್ಲಿದೆ. ಭಕ್ತರಿಗೆ ಅನುಕೂಲ ಆಗಲೆಂದು 6 ಕಡೆಗಳಲ್ಲಿ ದೀಪಗಳನ್ನು ಇಡಲಾಗಿದೆ. ಭಕ್ತರು ನಿಗದಿತ ಸ್ಥಳದಲ್ಲೇ ಎಣ್ಣೆ ಹಾಕುವುದು ಕಂಡುಬಂತು. ಕೋವಿಡ್ ಮಾರ್ಗಸೂಚಿ ಪಾಲಿಸುವ ಕುರಿತು ಸಿಬ್ಬಂದಿಯು ಧ್ವನಿವರ್ಧಕದಲ್ಲಿ ತಿಳಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ</strong>: ನವರಾತ್ರಿಯ 5ನೇ ದಿನವಾದ ಸೋಮವಾರ ಸುಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ನಾನಾ ಭಾಗಗಳಿಂದ ಭಕ್ತಸಾಗರವೇ ಹರಿದು ಬಂದಿತ್ತು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮೊಳಗಿತು.</p>.<p>ತಂಪಾದ ವಾತಾವರಣ ಮತ್ತು ಆಗಾಗ ಬೀಳುತ್ತಿದ್ದ ಮಳೆಯ ನಡುವೆಯೂ ಭಕ್ತರು ಸರದಿ ಸಾಲಿನಲ್ಲಿ ಬಂದು ಯಲ್ಲಮ್ಮ ದೇವಿಯ ದರ್ಶನ ಪಡೆದರು.</p>.<p>ಕೋವಿಡ್ ಭೀತಿ ನಡುವೆಯೂ ಏಳುಕೊಳ್ಳದ ನಾಡಿನಲ್ಲಿ ನವರಾತ್ರಿ ಉತ್ಸವ ಸಡಗರದಿಂದ ನಡೆಯುತ್ತಿದೆ. ಕರ್ನಾಟಕದೊಂದಿಗೆ, ಗೋವಾ, ತಮಿಳನಾಡು, ಆಂಧ್ರ ಮತ್ತು ನೆರೆಯ ಮಹಾತಾಷ್ಟ್ರದಿಂದಲೂ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಬಂದು ದರ್ಶನಾಶೀರ್ವಾದ ಪಡೆಯುತ್ತಿದ್ದಾರೆ. ಹಲವು ಭಕ್ತರು ಭಾನುವಾರ ರಾತ್ರಿಯೇ ಯಲ್ಲಮ್ಮನಗುಡ್ಡಕ್ಕೆ ಬಂದಿದ್ದರು.</p>.<p>ಸೋಮವಾರ ಬೆಳಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಿ, ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಲಾಯಿತು.</p>.<p>ನವರಾತ್ರಿ ವೇಳೆ ಯಲ್ಲಮ್ಮನಗುಡ್ಡಕ್ಕೆ ಬರುವ ಪ್ರತಿ ಭಕ್ತರು ದೀಪಕ್ಕೆ ಎಣ್ಣೆ ಹಾಕುವ ಪದ್ಧತಿ ರೂಢಿಯಲ್ಲಿದೆ. ಭಕ್ತರಿಗೆ ಅನುಕೂಲ ಆಗಲೆಂದು 6 ಕಡೆಗಳಲ್ಲಿ ದೀಪಗಳನ್ನು ಇಡಲಾಗಿದೆ. ಭಕ್ತರು ನಿಗದಿತ ಸ್ಥಳದಲ್ಲೇ ಎಣ್ಣೆ ಹಾಕುವುದು ಕಂಡುಬಂತು. ಕೋವಿಡ್ ಮಾರ್ಗಸೂಚಿ ಪಾಲಿಸುವ ಕುರಿತು ಸಿಬ್ಬಂದಿಯು ಧ್ವನಿವರ್ಧಕದಲ್ಲಿ ತಿಳಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>