<p><strong>ಉಗರಗೋಳ (ಸವದತ್ತಿ ತಾ.): </strong>ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಘಟಸ್ಥಾಪನೆ ಕಾರ್ಯಕ್ರಮದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಮಾಮನಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ದೀಪಕ್ಕೆ ಎಣ್ಣೆ ಹಾಕುವ ಮೂಲಕ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಮಾಮನಿ, ‘ವಿಶ್ವವಿಖ್ಯಾತ ಮೈಸೂರು ದಸರಾ ಸೇರಿ ಎಲ್ಲ ಉತ್ಸವಗಳನ್ನು ಸರ್ಕಾರ ಈ ಬಾರಿ ಸರಳವಾಗಿ ಆಚರಿಸುತ್ತಿದೆ. ಪವಿತ್ರ ಸ್ಥಳ ಯಲ್ಲಮ್ಮನ ಸನ್ನಿಧಿಯಲ್ಲೂ ನವರಾತ್ರಿ ಉತ್ಸವ ಸರಳವಾಗಿರಲಿದೆ. ಭಕ್ತರು ಇದಕ್ಕೆ ಸಹಕಾರ ನೀಡಬೇಕು. ಆದಿಶಕ್ತಿಯು ದೇಶವನ್ನು ಕೊರೊನಾ ಸಂಕಷ್ಟದಿಂದ ಮುಕ್ತಗೊಳಿಸಲಿ’ ಎಂದು ಹೇಳಿದರು.</p>.<p>‘ಕೋವಿಡ್ ಹಾವಳಿ ತಗ್ಗಿದ ನಂತರ ಯಲ್ಲಮ್ಮನಗುಡ್ಡದಲ್ಲಿ ಅಭಿವೃದ್ಧಿ ಕೆಲಸ ಚುರುಕುಗೊಳಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಗಂಗಮ್ಮತಾಯಿ ಮಾಮನಿ, ಸವದತ್ತಿ ತಹಶೀಲ್ದಾರ್ ಪ್ರಶಾಂತ ಪಾಟೀಲ, ಯಲ್ಲಮ್ಮ ದೇವಸ್ಥಾನ ಇಒ ರವಿ ಕೋಟಾರಗಸ್ತಿ, ಎಇಒ ಅರವಿಂದ ಮಾಳಗೆ, ಸಿ.ಎಸ್. ಪಟ್ಟಣಶೆಟ್ಟಿ, ಎಂ.ವಿ. ಮುಳ್ಳೂರ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ವರ್ಷಾ ಗಾಂವಕರ, ಅರ್ಚಕರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ (ಸವದತ್ತಿ ತಾ.): </strong>ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಘಟಸ್ಥಾಪನೆ ಕಾರ್ಯಕ್ರಮದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಮಾಮನಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ದೀಪಕ್ಕೆ ಎಣ್ಣೆ ಹಾಕುವ ಮೂಲಕ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಮಾಮನಿ, ‘ವಿಶ್ವವಿಖ್ಯಾತ ಮೈಸೂರು ದಸರಾ ಸೇರಿ ಎಲ್ಲ ಉತ್ಸವಗಳನ್ನು ಸರ್ಕಾರ ಈ ಬಾರಿ ಸರಳವಾಗಿ ಆಚರಿಸುತ್ತಿದೆ. ಪವಿತ್ರ ಸ್ಥಳ ಯಲ್ಲಮ್ಮನ ಸನ್ನಿಧಿಯಲ್ಲೂ ನವರಾತ್ರಿ ಉತ್ಸವ ಸರಳವಾಗಿರಲಿದೆ. ಭಕ್ತರು ಇದಕ್ಕೆ ಸಹಕಾರ ನೀಡಬೇಕು. ಆದಿಶಕ್ತಿಯು ದೇಶವನ್ನು ಕೊರೊನಾ ಸಂಕಷ್ಟದಿಂದ ಮುಕ್ತಗೊಳಿಸಲಿ’ ಎಂದು ಹೇಳಿದರು.</p>.<p>‘ಕೋವಿಡ್ ಹಾವಳಿ ತಗ್ಗಿದ ನಂತರ ಯಲ್ಲಮ್ಮನಗುಡ್ಡದಲ್ಲಿ ಅಭಿವೃದ್ಧಿ ಕೆಲಸ ಚುರುಕುಗೊಳಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಗಂಗಮ್ಮತಾಯಿ ಮಾಮನಿ, ಸವದತ್ತಿ ತಹಶೀಲ್ದಾರ್ ಪ್ರಶಾಂತ ಪಾಟೀಲ, ಯಲ್ಲಮ್ಮ ದೇವಸ್ಥಾನ ಇಒ ರವಿ ಕೋಟಾರಗಸ್ತಿ, ಎಇಒ ಅರವಿಂದ ಮಾಳಗೆ, ಸಿ.ಎಸ್. ಪಟ್ಟಣಶೆಟ್ಟಿ, ಎಂ.ವಿ. ಮುಳ್ಳೂರ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ವರ್ಷಾ ಗಾಂವಕರ, ಅರ್ಚಕರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>