‘ಈ ಕೈಗಾರಿಕಾ ಪ್ರದೇಶಗಳು ರಸ್ತೆ, ಚರಂಡಿ, ಬೀದಿದೀಪಗಳು, ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಮೊದಲಾದ ಮೂಲಸೌಲಭ್ಯಗಲಿಲ್ಲದೆ ಬಳಲುತ್ತಿವೆ. ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ₹ 56 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಸರ್ಕಾರದಿಂದ ಇದಕ್ಕೂ ಮನ್ನಣೆ ದೊರೆತಿಲ್ಲ’ ಎಂದು ದೂರಿದ್ದಾರೆ.