‘ರಾಜ್ಯದಲ್ಲಿ 2 ವರ್ಷಗಳಿಂದ 32 ಮಂದಿ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ನಮ್ಮ ಸಮಸ್ಯೆಗಳ ಕುರಿತು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮಾಡುವ ಮತ್ತು ಸರ್ಕಾರದ ಗಮನಸೆಳೆಯುವ ಉದ್ದೇಶದ ಭಾಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಜಿಲ್ಲಾ ನೇಕಾರರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಗಜಾನನ ಗುಂಜೇರಿ ತಿಳಿಸಿದ್ದಾರೆ.