<p><strong>ಬೆಳಗಾವಿ: </strong>‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಅಳವಡಿಕೆಯಿಂದ ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ಸಜ್ಜುಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರಲಾಗುವುದು. ಇದರಿಂದ ಭವಿಷ್ಯದಲ್ಲಿ ವಿವಿಧ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.</p>.<p>ಇಲ್ಲಿನ ಗಾಂಧಿ ಭವನದಲ್ಲಿ ಬುಧವಾರ ನಡೆದ ಎನ್ಇಪಿ ಕುರಿತ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಸರ್ಕಾರ ಎನ್ಇಪಿ ಅನುಷ್ಠಾನಗೊಳಿಸಿದೆ. 34 ವರ್ಷಗಳ ನಂತರ ಮೊದಲ ಬಾರಿಗೆ ಜಾರಿಯಾದ ಶಿಕ್ಷಣ ನೀತಿ ಇದಾಗಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.</p>.<p>‘ದೇಶವನ್ನು ಜ್ಞಾನ ಜಗತ್ತಿನ ಬಲಶಾಲಿ ಆಗಿಸಲು, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವುದು ನೀತಿಯ ದೃಷ್ಟಿಕೋನದ ಮೂಲ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಪ್ರಾಥಮಿಕ ಹಂತದಿಂದಲೇ ಬದಲಾವಣೆ:</p>.<p>‘ಪ್ರಾಥಮಿಕ ಹಂತದಿಂದಲೇ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ನೀತಿ ಜಾರಿಗೆ ತರಲಾಗಿದೆ. ನೀತಿಯ ಜಾರಿಗೆ ತಂದ ನಂತರ ಅನೇಕ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದು, ಕಾರ್ಯಾಗಾರ ಏರ್ಪಡಿಸಿ ಗೊಂದಲ ನಿವಾರಿಸಲಾಗುವುದು. ಪ್ರತಿ ಶಾಲಾ- ಕಾಲೇಜುಗಳಲ್ಲಿ ಶಿಕ್ಷಕರಿಗೆ ಎನ್ಇಪಿ ಪಠ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಪಠ್ಯಗಳ ಬದಲಾವಣೆಯಿಂದ ಮಕ್ಕಳ ಭವಿಷ್ಯದಲ್ಲಿ ಉತ್ತಮ ಬದಲಾವಣೆ ಆಗಲಿದೆ. ಎನ್ಇಪಿಯು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯ ಕಾರ್ಯ ನಿರ್ವಹಿಸಲಿದೆ’ ಎಂದು ತಿಳಿಸಿದರು.</p>.<p>ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪೂರ, ಹಣಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಅಳವಡಿಕೆಯಿಂದ ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ಸಜ್ಜುಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರಲಾಗುವುದು. ಇದರಿಂದ ಭವಿಷ್ಯದಲ್ಲಿ ವಿವಿಧ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.</p>.<p>ಇಲ್ಲಿನ ಗಾಂಧಿ ಭವನದಲ್ಲಿ ಬುಧವಾರ ನಡೆದ ಎನ್ಇಪಿ ಕುರಿತ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಸರ್ಕಾರ ಎನ್ಇಪಿ ಅನುಷ್ಠಾನಗೊಳಿಸಿದೆ. 34 ವರ್ಷಗಳ ನಂತರ ಮೊದಲ ಬಾರಿಗೆ ಜಾರಿಯಾದ ಶಿಕ್ಷಣ ನೀತಿ ಇದಾಗಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.</p>.<p>‘ದೇಶವನ್ನು ಜ್ಞಾನ ಜಗತ್ತಿನ ಬಲಶಾಲಿ ಆಗಿಸಲು, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವುದು ನೀತಿಯ ದೃಷ್ಟಿಕೋನದ ಮೂಲ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಪ್ರಾಥಮಿಕ ಹಂತದಿಂದಲೇ ಬದಲಾವಣೆ:</p>.<p>‘ಪ್ರಾಥಮಿಕ ಹಂತದಿಂದಲೇ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ನೀತಿ ಜಾರಿಗೆ ತರಲಾಗಿದೆ. ನೀತಿಯ ಜಾರಿಗೆ ತಂದ ನಂತರ ಅನೇಕ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದು, ಕಾರ್ಯಾಗಾರ ಏರ್ಪಡಿಸಿ ಗೊಂದಲ ನಿವಾರಿಸಲಾಗುವುದು. ಪ್ರತಿ ಶಾಲಾ- ಕಾಲೇಜುಗಳಲ್ಲಿ ಶಿಕ್ಷಕರಿಗೆ ಎನ್ಇಪಿ ಪಠ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಪಠ್ಯಗಳ ಬದಲಾವಣೆಯಿಂದ ಮಕ್ಕಳ ಭವಿಷ್ಯದಲ್ಲಿ ಉತ್ತಮ ಬದಲಾವಣೆ ಆಗಲಿದೆ. ಎನ್ಇಪಿಯು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯ ಕಾರ್ಯ ನಿರ್ವಹಿಸಲಿದೆ’ ಎಂದು ತಿಳಿಸಿದರು.</p>.<p>ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪೂರ, ಹಣಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>