ಕುಷ್ಠರೋಗ ಪತ್ತೆ ಅಭಿಯಾನ 27ರಿಂದ
‘ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕುಗಳಲ್ಲಿ ಕುಷ್ಠರೋಗ ಪ್ರಕರಣ ಹೆಚ್ಚಾಗಿ ಕಂಡುಬಂದಿವೆ. ಆ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡು ಶೀಘ್ರವಾಗಿ ಪ್ರಕರಣ ಪತ್ತೆ ಹಚ್ಚಿ ತ್ವರಿತವಾಗಿ ಚಿಕಿತ್ಸೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
‘ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಡಿ.27ರಿಂದ 2024ರ ಜ.11ರವರೆಗೆ ನಡೆಯಲಿದೆ. ಈ ರೋಗದ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ ಜಿಲ್ಲಾ ಸಮೀಕ್ಷಾಧಿಕಾರಿ ಡಾ.ಸಂಜಯ ದೊಡ್ಡಮನಿ ಇದ್ದರು.