<p><strong>ಬೆಳಗಾವಿ:</strong> ‘ಹೊಸ ಶಿಕ್ಷಣ ನೀತಿ ಕೇಸರೀಕರಣವಲ್ಲ. ಬದಲಿಗೆ ಅದು ಭಾರತದ ಗೌರವಯುತ ಜ್ಞಾನ ಪರಂಪರೆ ಪ್ರತಿಬಿಂಬಿಸುತ್ತದೆ. ಇಂದು ಭಾರತ ವಿಶ್ವದ ನಾಲ್ಕನೇ ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯಲು ನಮ್ಮ ಜ್ಞಾನ ಪರಂಪರೆಯೇ ಕಾರಣ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. </p><p>ಇಲ್ಲಿನ ಕ್ಯಾಂಪ್ ಪ್ರದೇಶದ ಬಿ.ಕೆ.ಮಾಡೆಲ್ ಪ್ರೌಢಶಾಲೆಯಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಬ್ರಿಟಿಷರು ಭಾರತೀಯರ ಮೇಲೆ ಗುಲಾಮಗಿರಿ ಹೇರುವ ಜತೆಗೆ, ನಮ್ಮ ಮನಸ್ಸಿನಲ್ಲಿ ಕೀಳರಿಮೆ ಬೀಜ ಬಿತ್ತಿದ್ದರು. ಭಾರತ ಬಡ ಮತ್ತು ಅಜ್ಞಾನಿ ರಾಷ್ಟ್ರ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಈ ಕೀಳರಿಮೆ ಹೋಗಲಾಡಿಸುವ ಕೆಲಸ ನಡೆಯುತ್ತಿದೆ’ ಎಂದು ತಿಳಿಸಿದರು.</p><p>‘ದೇಶದಲ್ಲಿನ ಗುಲಾಮಿತನ ತೆಗೆದುಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ತೊಟ್ಟಿದ್ದಾರೆ. ಹಾಗಾಗಿ ನಾವು ಸ್ವದೇಶಿ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು. ಭಾರತದಲ್ಲಿ ಶಿಕ್ಷಣ ಪದ್ಧತಿ ಅಮೂಲಾಗ್ರವಾಗಿ ಬದಲಾಗಬೇಕು. 2047ರ ವೇಳೆ ಭಾರತ ವಿಕಸಿತ ರಾಷ್ಟ್ರವಾಗಿ ಮುನ್ನಡೆಯಲು ಯುವಪೀಳಿಗೆ ಸಿದ್ಧಗೊಳಿಸಬೇಕು’ ಎಂದು ಕರೆಕೊಟ್ಟರು.</p><p>ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ‘ಬ್ರಿಟಿಷರ ಕೇಂದ್ರ ಕಚೇರಿಯಾಗಿದ್ದ ಕಾಲದಿಂದಲೂ ಬೆಳಗಾವಿಯು ಮಿಷನರಿ ಶಾಲೆಗಳ ಪ್ರಭಾವ ಹೆಚ್ಚಿತ್ತು. ಅಂಥ ಕಠಿಣ ಸಮಯದಲ್ಲಿ ಧೈರ್ಯವಂತ ಶಿಕ್ಷಕರು ಮತ್ತು ದಾನಿಗಳು ಸೇರಿ ಬಿ.ಕೆ.ಮಾಡೆಲ್ ಶಾಲೆ ಆರಂಭಿಸಿದರು. ಗುಣಾತ್ಮಕ ಶಿಕ್ಷಣದ ಮೂಲಕ ಈ ಶಾಲೆ 100 ವರ್ಷ ಪೂರೈಸಿರುವುದು ಹೆಮ್ಮೆಯ ವಿಷಯ’ ಎಂದು ತಿಳಿಸಿದರು.</p><p>ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಸಾಹಿತಿ ಬಸವರಾಜ ಜಗಜಂಪಿ, ಮಾಜಿ ಶಾಸಕ ಸಂಜಯ ಪಾಟೀಲ, ಅವಿನಾಶ ಪೋತದಾರ, ಜಯಂತ ದೇಶಪಾಂಡೆ, ಉಪಸ್ಥಿತರಿದ್ದರು.</p><p>ಸಾವಿರಾರು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಹೊಸ ಶಿಕ್ಷಣ ನೀತಿ ಕೇಸರೀಕರಣವಲ್ಲ. ಬದಲಿಗೆ ಅದು ಭಾರತದ ಗೌರವಯುತ ಜ್ಞಾನ ಪರಂಪರೆ ಪ್ರತಿಬಿಂಬಿಸುತ್ತದೆ. ಇಂದು ಭಾರತ ವಿಶ್ವದ ನಾಲ್ಕನೇ ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯಲು ನಮ್ಮ ಜ್ಞಾನ ಪರಂಪರೆಯೇ ಕಾರಣ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. </p><p>ಇಲ್ಲಿನ ಕ್ಯಾಂಪ್ ಪ್ರದೇಶದ ಬಿ.ಕೆ.ಮಾಡೆಲ್ ಪ್ರೌಢಶಾಲೆಯಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಬ್ರಿಟಿಷರು ಭಾರತೀಯರ ಮೇಲೆ ಗುಲಾಮಗಿರಿ ಹೇರುವ ಜತೆಗೆ, ನಮ್ಮ ಮನಸ್ಸಿನಲ್ಲಿ ಕೀಳರಿಮೆ ಬೀಜ ಬಿತ್ತಿದ್ದರು. ಭಾರತ ಬಡ ಮತ್ತು ಅಜ್ಞಾನಿ ರಾಷ್ಟ್ರ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಈ ಕೀಳರಿಮೆ ಹೋಗಲಾಡಿಸುವ ಕೆಲಸ ನಡೆಯುತ್ತಿದೆ’ ಎಂದು ತಿಳಿಸಿದರು.</p><p>‘ದೇಶದಲ್ಲಿನ ಗುಲಾಮಿತನ ತೆಗೆದುಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ತೊಟ್ಟಿದ್ದಾರೆ. ಹಾಗಾಗಿ ನಾವು ಸ್ವದೇಶಿ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು. ಭಾರತದಲ್ಲಿ ಶಿಕ್ಷಣ ಪದ್ಧತಿ ಅಮೂಲಾಗ್ರವಾಗಿ ಬದಲಾಗಬೇಕು. 2047ರ ವೇಳೆ ಭಾರತ ವಿಕಸಿತ ರಾಷ್ಟ್ರವಾಗಿ ಮುನ್ನಡೆಯಲು ಯುವಪೀಳಿಗೆ ಸಿದ್ಧಗೊಳಿಸಬೇಕು’ ಎಂದು ಕರೆಕೊಟ್ಟರು.</p><p>ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ‘ಬ್ರಿಟಿಷರ ಕೇಂದ್ರ ಕಚೇರಿಯಾಗಿದ್ದ ಕಾಲದಿಂದಲೂ ಬೆಳಗಾವಿಯು ಮಿಷನರಿ ಶಾಲೆಗಳ ಪ್ರಭಾವ ಹೆಚ್ಚಿತ್ತು. ಅಂಥ ಕಠಿಣ ಸಮಯದಲ್ಲಿ ಧೈರ್ಯವಂತ ಶಿಕ್ಷಕರು ಮತ್ತು ದಾನಿಗಳು ಸೇರಿ ಬಿ.ಕೆ.ಮಾಡೆಲ್ ಶಾಲೆ ಆರಂಭಿಸಿದರು. ಗುಣಾತ್ಮಕ ಶಿಕ್ಷಣದ ಮೂಲಕ ಈ ಶಾಲೆ 100 ವರ್ಷ ಪೂರೈಸಿರುವುದು ಹೆಮ್ಮೆಯ ವಿಷಯ’ ಎಂದು ತಿಳಿಸಿದರು.</p><p>ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಸಾಹಿತಿ ಬಸವರಾಜ ಜಗಜಂಪಿ, ಮಾಜಿ ಶಾಸಕ ಸಂಜಯ ಪಾಟೀಲ, ಅವಿನಾಶ ಪೋತದಾರ, ಜಯಂತ ದೇಶಪಾಂಡೆ, ಉಪಸ್ಥಿತರಿದ್ದರು.</p><p>ಸಾವಿರಾರು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>