<p><strong>ಬೆಳಗಾವಿ: </strong>ಜಿಲ್ಲೆಯ ಘಟಪ್ರಭಾ ಮತ್ತು ಚಿಕ್ಕೋಡಿ ನಡುವಿನ ಜೋಡಿ ರೈಲು ಮಾರ್ಗವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಸಾರ್ವಜನಿಕ ಬಳಕೆಗೆ ಸಮರ್ಪಿಸಿದರು.</p>.<p>ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಯಬಾಗ ಶಾಸಕ ಡಿ.ಎಂ. ಐಹೊಳೆ ಭಾಗವಹಿಸಿದ್ದಾರೆ.</p>.<p>‘ಲೋಂಡಾ–ಮೀರಜ್ ಜೋಡಿ ರೈಲು ಮಾರ್ಗದ ಮೊದಲ ಹಂತ (16 ಕಿ.ಮೀ.) ಪೂರ್ಣಗೊಂಡಂತಾಗಿದೆ. ಈ ಮಾರ್ಗವು ಘಟಪ್ರಭಾ, ಬಾಗೇವಾಡಿ (ತಂಗುದಾಣ) ಹಾಗೂ ಚಿಕ್ಕೋಡಿ ನಿಲ್ದಾಣಗಳನ್ನು ಒಳಗೊಂಡಿದೆ. ಹೆಚ್ಚಿನ ರೈಲುಗಳು ಓಡಾಡುವುದಕ್ಕೆ ಅನುಕೂಲವಾಗುವಂತಹ ಹೆಚ್ಚಿನ ಸಾಮರ್ಥ್ಯವನ್ನು ಮಾರ್ಗ ಹೊಂದಿದೆ. ರೈಲುಗಳು ಕ್ರಾಸ್ ಮಾಡುವುದಕ್ಕೆ ಇನ್ಮುಂದೆ ಕಾಯುವ ಅಗತ್ಯವಿರುವುದಿಲ್ಲ’ ಎಂದು ಅಂಗಡಿ ತಿಳಿಸಿದರು.</p>.<p><strong>ರೈಲು ನಿಲ್ದಾಣದಲ್ಲಿ ‘ತಾಯಿಯ ಮಡಿಲು’</strong></p>.<p><strong>ಬೆಳಗಾವಿ: </strong>ಇಲ್ಲಿನ ರೈಲು ನಿಲ್ದಾಣದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ಹಾಗೂ ರೈಲ್ವೆ ಇಲಾಖೆ ಸಹಕಾರದೊಂದಿಗೆ ‘ತಾಯಿ ಮಡಿಲು’ ಕಾರ್ಯಕ್ರಮವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಉದ್ಘಾಟಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕ ಅನಿಲ ಬೆನಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಘಟಪ್ರಭಾ ಮತ್ತು ಚಿಕ್ಕೋಡಿ ನಡುವಿನ ಜೋಡಿ ರೈಲು ಮಾರ್ಗವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಸಾರ್ವಜನಿಕ ಬಳಕೆಗೆ ಸಮರ್ಪಿಸಿದರು.</p>.<p>ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ರಾಯಬಾಗ ಶಾಸಕ ಡಿ.ಎಂ. ಐಹೊಳೆ ಭಾಗವಹಿಸಿದ್ದಾರೆ.</p>.<p>‘ಲೋಂಡಾ–ಮೀರಜ್ ಜೋಡಿ ರೈಲು ಮಾರ್ಗದ ಮೊದಲ ಹಂತ (16 ಕಿ.ಮೀ.) ಪೂರ್ಣಗೊಂಡಂತಾಗಿದೆ. ಈ ಮಾರ್ಗವು ಘಟಪ್ರಭಾ, ಬಾಗೇವಾಡಿ (ತಂಗುದಾಣ) ಹಾಗೂ ಚಿಕ್ಕೋಡಿ ನಿಲ್ದಾಣಗಳನ್ನು ಒಳಗೊಂಡಿದೆ. ಹೆಚ್ಚಿನ ರೈಲುಗಳು ಓಡಾಡುವುದಕ್ಕೆ ಅನುಕೂಲವಾಗುವಂತಹ ಹೆಚ್ಚಿನ ಸಾಮರ್ಥ್ಯವನ್ನು ಮಾರ್ಗ ಹೊಂದಿದೆ. ರೈಲುಗಳು ಕ್ರಾಸ್ ಮಾಡುವುದಕ್ಕೆ ಇನ್ಮುಂದೆ ಕಾಯುವ ಅಗತ್ಯವಿರುವುದಿಲ್ಲ’ ಎಂದು ಅಂಗಡಿ ತಿಳಿಸಿದರು.</p>.<p><strong>ರೈಲು ನಿಲ್ದಾಣದಲ್ಲಿ ‘ತಾಯಿಯ ಮಡಿಲು’</strong></p>.<p><strong>ಬೆಳಗಾವಿ: </strong>ಇಲ್ಲಿನ ರೈಲು ನಿಲ್ದಾಣದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ಹಾಗೂ ರೈಲ್ವೆ ಇಲಾಖೆ ಸಹಕಾರದೊಂದಿಗೆ ‘ತಾಯಿ ಮಡಿಲು’ ಕಾರ್ಯಕ್ರಮವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಉದ್ಘಾಟಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕ ಅನಿಲ ಬೆನಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>