ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಡಸೋಸಿ ಶ್ರೀ ಆಸ್ಪತ್ರೆಯಿಂದ ಬಿಡುಗಡೆ

Last Updated 6 ಜುಲೈ 2022, 17:50 IST
ಅಕ್ಷರ ಗಾತ್ರ

ಬೆಳಗಾವಿ: ಕಾರ್ ಪಲ್ಟಿಯಾಗಿ ಗಾಯಗೊಂಡ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಬುಧವಾರ ರಾತ್ರಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮಠದತ್ತ ಪ್ರಯಾಣ ಬೆಳೆಸಿದರು.

ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು, ಆರೋಗ್ಯ ಸರಿಯಾಗಿರುವ ಕಾರಣ ಡಿಸ್ಚಾರ್ ಆದರು.

ಈ ವೇಳೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ, ಮಾಜಿ ಸಂಸದ ರಮೇಶ ಕತ್ತಿ ಅವರು ಸ್ವಾಮೀಜಿ ಅವರನ್ನು ನಿಡಸೋಸಿ ಮಠಕ್ಕೆ ಕರೆದುಕೊಂಡು ಹೋದರು.

ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ವೇಳೆ ನಿಡಸೋಸಿ ಸ್ವಾಮೀಜಿ ಕಾರು ಪಲ್ಟಿಯಾಗಿತ್ತು. ಸ್ವಾಮೀಜಿ ಜೊತೆ ಅವರ ಸಹಾಯಕರು, ಚಾಲಕ ಸೇರಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಯಾರಿಗೂ ಗಂಭೀರ ಗಾಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT