‘ನಿಷೇಧಾಜ್ಞೆ ಸಮಯದಲ್ಲಿ ಜನರು ಅನವಶ್ಯವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅವಶ್ಯ ಚಟುವಟಿಕೆಗಳಿಗೆ, ತಾಲ್ಲೂಕುಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ. ಆದೇಶ ಜಾರಿಗೊಳಿಸಲು ನಗರದ ಪೊಲೀಸ್ ಆಯುಕ್ತರು, ಎಸ್ಪಿ, ಎಲ್ಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ. ಇದರಂತೆ, ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ.