ರಾತ್ರಿ ಕರ್ಫ್ಯೂಗೆ ಟ್ಯಾಕ್ಸಿ ಮಾಲೀಕರ ಸಂಘ ಹಾಗೂ ಬಾರ್ಗಳ ಮಾಲೀಕರು ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಮೊದಲು ಜೀವ ಅಮೂಲ್ಯ. ಲಾಭ–ನಷ್ಟದ ಲೆಕ್ಕ ಹಾಕುವುದು ಸರಿಯಲ್ಲ. ಪ್ರಾಣವೊಂದಿದ್ದರೆ ಏನೆಲ್ಲಾ ಮಾಡಬಹುದು. ಹೀಗಾಗಿ, ಜನರ ಜೀವ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ಕಾಂಗ್ರೆಸ್ನವರು ಮೊದಲಿನಿಂದಲೂ ಎಲ್ಲದಕ್ಕೂ ವಿರೋಧಿಸುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಅದೇ ಧರ್ಮವೆಂದು ಭಾವಿಸಿದ್ದಾರೆ. ಜೀವದ ಜೊತೆಗೆ ಚೆಲ್ಲಾಟ ಆಡುವುದು ಆಗಬಾರದು’ ಎಂದು ಹೇಳಿದರು.