ರಥೋತ್ಸವದಲ್ಲಿ ನಾಡಿನ ವಿವಿಧೆಡೆಯಿಂದ ಭಾಗವಹಿಸಿದ್ದ ಭಕ್ತರು ರಥಕ್ಕೆ ಹಣ್ಣು, ಹೂವು, ಕಾಯಿಗಳನ್ನು ಅರ್ಪಿಸಿದರು. ಬೆಳಿಗ್ಗೆ ಮೂಲ ಸನ್ನಿಧಿಗೆ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಮೂರು ದಿನಗಳ ವರೆಗೆ ಜರುಗಿದ ನಿಜಗುಣ ದೇವರ ಷಷ್ಠ್ಯಬ್ಧಿ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಮಹಾತ್ಮರು ಭಾಗವಹಿಸಿ ಉಪಮದೇಶಾಮೃತವನ್ನು ನೀಡಿದರು.