<p><strong>ನಿಪ್ಪಾಣಿ:</strong> ಗಡಿಭಾಗದ ನಿಪ್ಪಾಣಿಯು ತಾಲ್ಲೂಕು ಕೇಂದ್ರವಾಗಿ ರಚನೆಯಾಗಿ ಎಂಟು ವರ್ಷವಾಗಿದೆ. ಆದರೆ, ಕೆಲವೇ ಇಲಾಖೆಗಳ ಕಚೇರಿಗಳಷ್ಟೇ ಕಾರ್ಯಾರಂಭ ಮಾಡಿವೆ. ವಿವಿಧ ಇಲಾಖೆಗಳ ಕಚೇರಿಗಳು ಇನ್ನೂ ಬಾರದ್ದರಿಂದ ಜನರ ಪರದಾಟ ಮುಂದುವರಿದಿದೆ. ಸರ್ಕಾರಿ ಕೆಲಸಗಳು, ದಾಖಲೆಗಾಗಿ ಹಳೇ ತಾಲ್ಲೂಕಾದ ಚಿಕ್ಕೋಡಿಗೆ ಅಲೆದಾಡಬೇಕಿದೆ.</p>.<p>ಈಗ ನಿಪ್ಪಾಣಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಇಲಾಖೆಗಳ ಕಚೇರಿಗಳಿಗೆ ಸ್ವಂತ ಕಟ್ಟಡ ಇಲ್ಲದ್ದರಿಂದ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಹೇಳಿಕೊಳ್ಳುವಂಥ ಸೌಕರ್ಯಗಳಿಲ್ಲ.</p>.<p>ಮೂರು ದಶಕಗಳಿಂದ ಪ್ರವಾಸಿ ಮಂದಿರದಲ್ಲಿದ್ದ ಉಪ ತಹಶೀಲ್ದಾರ್ ಕಚೇರಿಯನ್ನು ತಹಶೀಲ್ದಾರ್ ಕಚೇರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಆದರೆ, ಸ್ವಂತ ಕಟ್ಟಡಕ್ಕೆ ಜಾಗ ಸಿಗದ ಕಾರಣ ಇನ್ನೂ ಪ್ರವಾಸಿ ಮಂದಿರದಲ್ಲೇ ಅದು ಕಾರ್ಯನಿರ್ವಹಿಸುತ್ತಿದೆ.</p>.<p>60 ವರ್ಷಗಳ ಹಿಂದೆ ಆರಂಭಗೊಂಡ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಪ್ರತ್ಯೇಕ ಕಟ್ಟಡವಿತ್ತು. ಆದರೆ, ಆ ಕಟ್ಟಡವನ್ನು ಮತ್ತೊಂದು ಸರ್ಕಾರಿ ಕಚೇರಿಗೆ ನೀಡಲಾಯಿತು. ಹಾಗಾಗಿ ಅದು ಈಗ ಲೋಕಮಾನ್ಯ ತಿಲಕ ಉದ್ಯಾನದ ಹಿಂಭಾಗದಲ್ಲಿರುವ ಹಳೆಯ ಶಾಲೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡದ ಚಾವಣಿ, ಗೋಡೆ ಕುಸಿಯುತ್ತಿದ್ದು, ಆತಂಕದಲ್ಲೇ ನೌಕರರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಇಲಾಖೆ ಕಚೇರಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಿಲ್ಲ.</p>.<p><strong>ತಾಲ್ಲೂಕು ಆಸ್ಪತ್ರೆಯಾಗುವುದು ಯಾವಾಗ?:</strong><br>ನಿಪ್ಪಾಣಿಯಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕಿದೆ. ರೋಗಿಗಳ ಸಂಖ್ಯೆಗೆ ತಕ್ಕಂತೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕಿದೆ. </p>.<p>ನಗರ ಹಾಗೂ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಆದರೆ, ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತವಾಗಿ ಚಿಕಿತ್ಸೆ ಕೊಡಿಸಲು ನಿಪ್ಪಾಣಿಯಲ್ಲಿ ಟ್ರಾಮಾಕೇರ್ ಸೆಂಟರ್ ಇಲ್ಲ. ಹಾಗಾಗಿ ಅಪಘಾತಕ್ಕೀಡಾದವರನ್ನು ಚಿಕಿತ್ಸೆಗಾಗಿ ಕೊಲ್ಹಾಪುರ ಅಥವಾ ಬೆಳಗಾವಿಯ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ನಿಪ್ಪಾಣಿಯಲ್ಲಿ ತುರ್ತಾಗಿ ಟ್ರಾಮಾಕೇರ್ ಸೆಂಟರ್ ಆರಂಭಿಸಬೇಕಿದೆ.</p>.<div><blockquote>ಜಿಲ್ಲಾ ಕೇಂದ್ರವಾಗುವ ಅರ್ಹತೆ ಹೊಂದಿರುವ ನಿಪ್ಪಾಣಿಗೆ ಅಗತ್ಯವಿರುವ ಸೌಲಭ್ಯಗಳನ್ನು ಈ ಬಜೆಟ್ನಲ್ಲಿ ಸರ್ಕಾರ ಘೋಷಿಸಬೇಕು</blockquote><span class="attribution"> ಸಂಜಯ ಸೂರ್ಯವಂಶಿ ಸಾಮಾಜಿಕ ಕಾರ್ಯಕರ್ತ</span></div>.<p><strong>ಬೇಕಿದೆ ಟೆಕ್ಸ್ಟೈಲ್ ಕ್ಲಸ್ಟರ್</strong> </p><p>ನಿಪ್ಪಾಣಿಯಲ್ಲಿ ಟೆಕ್ಸ್ಟೈಲ್ ಮತ್ತು ಬೆಳ್ಳಿ ಕ್ಲಸ್ಟರ್ ಆರಂಭಿಸಬೇಕು ಎಂಬ ಬೇಡಿಕೆ ದಶಕಗಳಿಂದಲೂ ಇದೆ. ಆದರೆ ಇಂದಿಗೂ ಬೇಡಿಕೆ ಈಡೇರದಿರುವುದು ಸ್ಥಳೀಯರ ನಿರಾಸೆಗೆ ಕಾರಣವಾಗಿದೆ. ಇಲ್ಲಿ ಪಾದರಕ್ಷೆ ಕ್ಲಸ್ಟರ್ ಆರಂಭಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದವು. ಆದರೆ ಈಗ ಆ ಯೋಜನೆಯೂ ಬಹುತೇಕ ಕುಂಠಿತಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ:</strong> ಗಡಿಭಾಗದ ನಿಪ್ಪಾಣಿಯು ತಾಲ್ಲೂಕು ಕೇಂದ್ರವಾಗಿ ರಚನೆಯಾಗಿ ಎಂಟು ವರ್ಷವಾಗಿದೆ. ಆದರೆ, ಕೆಲವೇ ಇಲಾಖೆಗಳ ಕಚೇರಿಗಳಷ್ಟೇ ಕಾರ್ಯಾರಂಭ ಮಾಡಿವೆ. ವಿವಿಧ ಇಲಾಖೆಗಳ ಕಚೇರಿಗಳು ಇನ್ನೂ ಬಾರದ್ದರಿಂದ ಜನರ ಪರದಾಟ ಮುಂದುವರಿದಿದೆ. ಸರ್ಕಾರಿ ಕೆಲಸಗಳು, ದಾಖಲೆಗಾಗಿ ಹಳೇ ತಾಲ್ಲೂಕಾದ ಚಿಕ್ಕೋಡಿಗೆ ಅಲೆದಾಡಬೇಕಿದೆ.</p>.<p>ಈಗ ನಿಪ್ಪಾಣಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಇಲಾಖೆಗಳ ಕಚೇರಿಗಳಿಗೆ ಸ್ವಂತ ಕಟ್ಟಡ ಇಲ್ಲದ್ದರಿಂದ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಹೇಳಿಕೊಳ್ಳುವಂಥ ಸೌಕರ್ಯಗಳಿಲ್ಲ.</p>.<p>ಮೂರು ದಶಕಗಳಿಂದ ಪ್ರವಾಸಿ ಮಂದಿರದಲ್ಲಿದ್ದ ಉಪ ತಹಶೀಲ್ದಾರ್ ಕಚೇರಿಯನ್ನು ತಹಶೀಲ್ದಾರ್ ಕಚೇರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಆದರೆ, ಸ್ವಂತ ಕಟ್ಟಡಕ್ಕೆ ಜಾಗ ಸಿಗದ ಕಾರಣ ಇನ್ನೂ ಪ್ರವಾಸಿ ಮಂದಿರದಲ್ಲೇ ಅದು ಕಾರ್ಯನಿರ್ವಹಿಸುತ್ತಿದೆ.</p>.<p>60 ವರ್ಷಗಳ ಹಿಂದೆ ಆರಂಭಗೊಂಡ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಪ್ರತ್ಯೇಕ ಕಟ್ಟಡವಿತ್ತು. ಆದರೆ, ಆ ಕಟ್ಟಡವನ್ನು ಮತ್ತೊಂದು ಸರ್ಕಾರಿ ಕಚೇರಿಗೆ ನೀಡಲಾಯಿತು. ಹಾಗಾಗಿ ಅದು ಈಗ ಲೋಕಮಾನ್ಯ ತಿಲಕ ಉದ್ಯಾನದ ಹಿಂಭಾಗದಲ್ಲಿರುವ ಹಳೆಯ ಶಾಲೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡದ ಚಾವಣಿ, ಗೋಡೆ ಕುಸಿಯುತ್ತಿದ್ದು, ಆತಂಕದಲ್ಲೇ ನೌಕರರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಇಲಾಖೆ ಕಚೇರಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಿಲ್ಲ.</p>.<p><strong>ತಾಲ್ಲೂಕು ಆಸ್ಪತ್ರೆಯಾಗುವುದು ಯಾವಾಗ?:</strong><br>ನಿಪ್ಪಾಣಿಯಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕಿದೆ. ರೋಗಿಗಳ ಸಂಖ್ಯೆಗೆ ತಕ್ಕಂತೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕಿದೆ. </p>.<p>ನಗರ ಹಾಗೂ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಆದರೆ, ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತವಾಗಿ ಚಿಕಿತ್ಸೆ ಕೊಡಿಸಲು ನಿಪ್ಪಾಣಿಯಲ್ಲಿ ಟ್ರಾಮಾಕೇರ್ ಸೆಂಟರ್ ಇಲ್ಲ. ಹಾಗಾಗಿ ಅಪಘಾತಕ್ಕೀಡಾದವರನ್ನು ಚಿಕಿತ್ಸೆಗಾಗಿ ಕೊಲ್ಹಾಪುರ ಅಥವಾ ಬೆಳಗಾವಿಯ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ನಿಪ್ಪಾಣಿಯಲ್ಲಿ ತುರ್ತಾಗಿ ಟ್ರಾಮಾಕೇರ್ ಸೆಂಟರ್ ಆರಂಭಿಸಬೇಕಿದೆ.</p>.<div><blockquote>ಜಿಲ್ಲಾ ಕೇಂದ್ರವಾಗುವ ಅರ್ಹತೆ ಹೊಂದಿರುವ ನಿಪ್ಪಾಣಿಗೆ ಅಗತ್ಯವಿರುವ ಸೌಲಭ್ಯಗಳನ್ನು ಈ ಬಜೆಟ್ನಲ್ಲಿ ಸರ್ಕಾರ ಘೋಷಿಸಬೇಕು</blockquote><span class="attribution"> ಸಂಜಯ ಸೂರ್ಯವಂಶಿ ಸಾಮಾಜಿಕ ಕಾರ್ಯಕರ್ತ</span></div>.<p><strong>ಬೇಕಿದೆ ಟೆಕ್ಸ್ಟೈಲ್ ಕ್ಲಸ್ಟರ್</strong> </p><p>ನಿಪ್ಪಾಣಿಯಲ್ಲಿ ಟೆಕ್ಸ್ಟೈಲ್ ಮತ್ತು ಬೆಳ್ಳಿ ಕ್ಲಸ್ಟರ್ ಆರಂಭಿಸಬೇಕು ಎಂಬ ಬೇಡಿಕೆ ದಶಕಗಳಿಂದಲೂ ಇದೆ. ಆದರೆ ಇಂದಿಗೂ ಬೇಡಿಕೆ ಈಡೇರದಿರುವುದು ಸ್ಥಳೀಯರ ನಿರಾಸೆಗೆ ಕಾರಣವಾಗಿದೆ. ಇಲ್ಲಿ ಪಾದರಕ್ಷೆ ಕ್ಲಸ್ಟರ್ ಆರಂಭಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದವು. ಆದರೆ ಈಗ ಆ ಯೋಜನೆಯೂ ಬಹುತೇಕ ಕುಂಠಿತಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>