<p><strong>ನಿಪ್ಪಾಣಿ</strong>: ಲಾಟರಿ ಮುಖಾಂತರ ವಸತಿ ರಹಿತ ಫಲಾನುಭವಿಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮಧ್ಯೆ ಗಲಾಟೆ ಏರ್ಪಟ್ಟು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕೊನೆಗೆ ಕಾರ್ಯಕ್ರಮವನ್ನೆ ರದ್ದುಪಡಿಸಿದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.</p>.<p>ಪಿಎಂ ಆವಾಸ್ ಯೋಜನೆಯಡಿ ಶಾಸಕಿ ಶಶಿಕಲಾ ಜೊಲ್ಲೆ ಆಡಳಿತದಲ್ಲಿ ನಗರ ಪಕ್ಕದಲ್ಲಿರುವ ಪಟ್ಟಣಕುಡಿ ವ್ಯಾಪ್ತಿಯಲ್ಲಿ ಒಟ್ಟು 1812 ವಸತಿಗಳ ನಿರ್ಮಾಣದ ಕಾರ್ಯ ಅನೇಕ ವರ್ಷಗಳಿಂದ ನಡೆದಿದೆ. ಅವುಗಳಲ್ಲಿ ಸುಮಾರು 600 ವಸತಿಗೃಹಗಳು ಪೂರ್ಣಗೊಂಡಿದ್ದು ಅವುಗಳನ್ನು ಮೊದಲು ಹಣ ತುಂಬಿದ ಫಲಾನುಭವಿಗಳಿಗೆ ಬುಧವಾರ ಹಂಚಿಕೆ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಮಂಗಳವಾರ ಈ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹಣ ತುಂಬಿದ 948 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಬೇಕೆಂದು ಒತ್ತಾಯಿಸಿ ನಗರಸಭೆಗೆ ಮುತ್ತಿಗೆ ಹಾಕಿದರು.</p>.<p>ಪರಿಸ್ಥಿತಿ ಮನಗಂಡು ಮತ್ತೆ 200 ಫಲಾನುಭವಿಗಳ ಹೆಸರುಗಳನ್ನು ಹೆಚ್ಚಿಸಿ ಒಟ್ಟು 800 ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಯಿತು. ಆದರೆ ಬುಧವಾರ ಬೆಳಿಗ್ಗೆ ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹಣ ತುಂಬಿದ 948 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಬೇಕೆಂದು ಒತ್ತಾಯಿಸಲು ಆರಂಭಿಸಿದರು.</p>.<p>ಈ ಮಧ್ಯೆ ವೇದಿಕೆಯಲ್ಲಿಯೇ ಶಾಸಕಿ ಶಶಿಕಲಾ ಜೊಲ್ಲೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಮತ್ತು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಅವರ ಮಧ್ಯೆ ಹಾಗೂ ವೇದಿಕೆ ಎದುರುಗಡೆ ಉಭಯ ಪಕ್ಷಗಳ ಮಧ್ಯೆ ಮಾತಿಗೆ ಮಾತು ಬೆಳೆದು ಉದ್ವಿಗ್ನದ ಪರಿಸ್ಥಿತಿ ಎದುರಾಗಿತ್ತು</p>.<p>ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕರೆಯಲಿಲ್ಲ, ಪೌರಾಯುಕ್ತರ ತಪ್ಪು ನಿರ್ವಹಣೆಯಿಂದ ಫಲಾನುಭವಿಗಳು ವಂಚಿತಾರಾಗುತ್ತಿದ್ದಾರೆಂದು ಬುಡಾ ಅಧ್ಯಕ್ಞ ಚಿಂಗಳೆ ಆರೋಪಿಸಿದರು.</p>.<p>ಇಂದಿನವರೆಗೆ ಕಾಂಗ್ರೆಸ್ ಯಾರಿಗಾದರೂ ಮನೆ ನಿರ್ಮಿಸಿದೆಯಾ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ವಿರೋಧ ಪಕ್ಷದವರು ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆಂದು ಕುಟುಕಿದರು. ಎಲ್ಲ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಲಾಗುವುದು ಎಂದು ಅಣ್ಣಾಸಾಹೇಬ ಜೊಲ್ಲೆ ಹೇಳಿದರು.</p>.<p>ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್ ಸುರೇಶ ಮುಂಜೆ, ಪೌರಾಯುಕ್ತ ಗಣಪತಿ ಪಾಟೀಲ, ಮೊದಲಾದವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-547445825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ಲಾಟರಿ ಮುಖಾಂತರ ವಸತಿ ರಹಿತ ಫಲಾನುಭವಿಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮಧ್ಯೆ ಗಲಾಟೆ ಏರ್ಪಟ್ಟು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕೊನೆಗೆ ಕಾರ್ಯಕ್ರಮವನ್ನೆ ರದ್ದುಪಡಿಸಿದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.</p>.<p>ಪಿಎಂ ಆವಾಸ್ ಯೋಜನೆಯಡಿ ಶಾಸಕಿ ಶಶಿಕಲಾ ಜೊಲ್ಲೆ ಆಡಳಿತದಲ್ಲಿ ನಗರ ಪಕ್ಕದಲ್ಲಿರುವ ಪಟ್ಟಣಕುಡಿ ವ್ಯಾಪ್ತಿಯಲ್ಲಿ ಒಟ್ಟು 1812 ವಸತಿಗಳ ನಿರ್ಮಾಣದ ಕಾರ್ಯ ಅನೇಕ ವರ್ಷಗಳಿಂದ ನಡೆದಿದೆ. ಅವುಗಳಲ್ಲಿ ಸುಮಾರು 600 ವಸತಿಗೃಹಗಳು ಪೂರ್ಣಗೊಂಡಿದ್ದು ಅವುಗಳನ್ನು ಮೊದಲು ಹಣ ತುಂಬಿದ ಫಲಾನುಭವಿಗಳಿಗೆ ಬುಧವಾರ ಹಂಚಿಕೆ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಮಂಗಳವಾರ ಈ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹಣ ತುಂಬಿದ 948 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಬೇಕೆಂದು ಒತ್ತಾಯಿಸಿ ನಗರಸಭೆಗೆ ಮುತ್ತಿಗೆ ಹಾಕಿದರು.</p>.<p>ಪರಿಸ್ಥಿತಿ ಮನಗಂಡು ಮತ್ತೆ 200 ಫಲಾನುಭವಿಗಳ ಹೆಸರುಗಳನ್ನು ಹೆಚ್ಚಿಸಿ ಒಟ್ಟು 800 ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಯಿತು. ಆದರೆ ಬುಧವಾರ ಬೆಳಿಗ್ಗೆ ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹಣ ತುಂಬಿದ 948 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಬೇಕೆಂದು ಒತ್ತಾಯಿಸಲು ಆರಂಭಿಸಿದರು.</p>.<p>ಈ ಮಧ್ಯೆ ವೇದಿಕೆಯಲ್ಲಿಯೇ ಶಾಸಕಿ ಶಶಿಕಲಾ ಜೊಲ್ಲೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಮತ್ತು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಅವರ ಮಧ್ಯೆ ಹಾಗೂ ವೇದಿಕೆ ಎದುರುಗಡೆ ಉಭಯ ಪಕ್ಷಗಳ ಮಧ್ಯೆ ಮಾತಿಗೆ ಮಾತು ಬೆಳೆದು ಉದ್ವಿಗ್ನದ ಪರಿಸ್ಥಿತಿ ಎದುರಾಗಿತ್ತು</p>.<p>ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕರೆಯಲಿಲ್ಲ, ಪೌರಾಯುಕ್ತರ ತಪ್ಪು ನಿರ್ವಹಣೆಯಿಂದ ಫಲಾನುಭವಿಗಳು ವಂಚಿತಾರಾಗುತ್ತಿದ್ದಾರೆಂದು ಬುಡಾ ಅಧ್ಯಕ್ಞ ಚಿಂಗಳೆ ಆರೋಪಿಸಿದರು.</p>.<p>ಇಂದಿನವರೆಗೆ ಕಾಂಗ್ರೆಸ್ ಯಾರಿಗಾದರೂ ಮನೆ ನಿರ್ಮಿಸಿದೆಯಾ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ವಿರೋಧ ಪಕ್ಷದವರು ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆಂದು ಕುಟುಕಿದರು. ಎಲ್ಲ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಲಾಗುವುದು ಎಂದು ಅಣ್ಣಾಸಾಹೇಬ ಜೊಲ್ಲೆ ಹೇಳಿದರು.</p>.<p>ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್ ಸುರೇಶ ಮುಂಜೆ, ಪೌರಾಯುಕ್ತ ಗಣಪತಿ ಪಾಟೀಲ, ಮೊದಲಾದವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-547445825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>