<p><strong>ಚನ್ನರಾಯಪಟ್ಟಣ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಪುಟ್ಟೇಗೌಡ ಹೇಳಿದರು.</p>.<p>ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿ ಹಲವು ಜನಪರ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರೂಪಿಸಿದೆ. ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಸಾಲ ಮನ್ನಾ ಮಾಡಲಾಗುವುದು ಎಂದು ಈಗ ಭರವಸೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಈಗಾಗಲೇ ಸಾಲ ಮನ್ನಾ ಮಾಡಿದ್ದಾರೆ ಎಂದರು.</p>.<p>ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಪಕ್ಷದಲ್ಲಿನ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.</p>.<p>‘ಕಬ್ಬಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಸಾಲ ನೀಡಲಾಗಿದೆಯೇ ಎಂಬುದನ್ನು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ’ ಎಂದು ಮೂದಲಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮುಖಂಡ ಎಂ.ಎ.ರಂಗಸ್ವಾಮಿ, ಮುಖಂಡರಾದ ಸಿ.ವಿ.ರಾಜಪ್ಪ, ಎಚ್.ಎಸ್.ವಿಜಯಕುಮಾರ್, ಜೆ.ಎಂ.ರಾಮಚಂದ್ರ, ಎಚ್.ಎಸ್.ಶ್ರೀಕಂಠಯ್ಯ, ಎಂ.ಕೆ. ಮಂಜೇಗೌಡ, ಮಂಜುನಾಥ್, ಎಂ. ಶಂಕರ್, ಬಷೀರ್, ಎಚ್.ಎಂ.ಜಯರಾಂ ಮಾತನಾಡಿದರು. ಮುಖಂಡರಾದ ದೇವಮ್ಮ, ಎಚ್.ಎಂ.ಪ್ರಮೀಳಾ, ಪುಟ್ಟಸ್ವಾಮಿ, ಎಚ್.ಜೆ.ಕಿರಣ್ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಪುಟ್ಟೇಗೌಡ ಹೇಳಿದರು.</p>.<p>ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿ ಹಲವು ಜನಪರ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರೂಪಿಸಿದೆ. ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಸಾಲ ಮನ್ನಾ ಮಾಡಲಾಗುವುದು ಎಂದು ಈಗ ಭರವಸೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಈಗಾಗಲೇ ಸಾಲ ಮನ್ನಾ ಮಾಡಿದ್ದಾರೆ ಎಂದರು.</p>.<p>ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಪಕ್ಷದಲ್ಲಿನ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.</p>.<p>‘ಕಬ್ಬಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಸಾಲ ನೀಡಲಾಗಿದೆಯೇ ಎಂಬುದನ್ನು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ’ ಎಂದು ಮೂದಲಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮುಖಂಡ ಎಂ.ಎ.ರಂಗಸ್ವಾಮಿ, ಮುಖಂಡರಾದ ಸಿ.ವಿ.ರಾಜಪ್ಪ, ಎಚ್.ಎಸ್.ವಿಜಯಕುಮಾರ್, ಜೆ.ಎಂ.ರಾಮಚಂದ್ರ, ಎಚ್.ಎಸ್.ಶ್ರೀಕಂಠಯ್ಯ, ಎಂ.ಕೆ. ಮಂಜೇಗೌಡ, ಮಂಜುನಾಥ್, ಎಂ. ಶಂಕರ್, ಬಷೀರ್, ಎಚ್.ಎಂ.ಜಯರಾಂ ಮಾತನಾಡಿದರು. ಮುಖಂಡರಾದ ದೇವಮ್ಮ, ಎಚ್.ಎಂ.ಪ್ರಮೀಳಾ, ಪುಟ್ಟಸ್ವಾಮಿ, ಎಚ್.ಜೆ.ಕಿರಣ್ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>