<p><strong>ನಿಪ್ಪಾಣಿ</strong>: ‘ಎಲ್ಲರೂ ಒಂದೊಂದು ಕ್ಷೇತ್ರದಲ್ಲಿ ಪಾರಂಗತರಾಗಿರುತ್ತಾರೆ. ಆದರೆ ನಮ್ಮ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲೂ ಪರಿಣತರಾಗಬೇಕು ಎಂಬುದು ನಮ್ಮ ಆಸೆ’ ಎಂದು ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಚೇರಮನ್ ಚಂದ್ರಕಾಂತ ಕೋಠಿವಾಲೆ ಹೇಳಿದರು.</p>.<p>ವಿಎಸ್ಎಂನ ಜಿ.ಐ. ಬಾಗೇವಾಡಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ಜರುಗಿದ ಕೃಷಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಯವರೆಗೆ ಸಾಗಿಸುವವರೆಗೆ ರೈತರ ನೋವು, ಕಷ್ಟ-ಸುಖಗಳನ್ನು ತಿಳಿದುಕೊಳ್ಳುವುದು, ಕೃಷಿ ಕುರಿತು ಆಸಕ್ತಿ ಬೆಳೆಸುವುದು, ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಬ್ರ್ಯಾಂಡಿಂಗ್ನೊಂದಿಗೆ ಕೃಷಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳಬೇಕೆಂಬುದೇ ಇಂದಿನ ಕೃಷಿ ಉತ್ಸವದ ಉದ್ದೇಶ. ನಮ್ಮ ವಿದ್ಯಾರ್ಥಿಗಳು ಶಿಕ್ಷಕರಿಂದ ಇವೆಲ್ಲ ವಿಷಯಗಳನ್ನು ತಿಳಿದುಕೊಂಡರು’ ಎಂದರು.</p>.<p>ಗಣ್ಯರು ಎತ್ತಿನಗಾಡಿಯಲ್ಲಿ ಬಂದು ಗಮನ ಸೆಳೆದರು. ಚೇರ್ಮನ್ ಚಂದ್ರಕಾಂತ ಕೋಠಿವಾಲೆ ಹಾಗೂ ನಿರ್ದೇಶಕ ಆನಂದ ಗಿಂಡೆ ಕೊಡಲಿಯಿಂದ ಹುಲ್ಲು ಕತ್ತರಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಗಣ್ಯರು ವಿದ್ಯಾರ್ಥಿಗಳಿಂದ ತರಕಾರಿಗಳನ್ನು ಕೊಂಡುಕೊಂಡರು.</p>.<p>ವೈಸ್- ಚೇರ್ಮನ್ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ನಿರ್ದೇಶಕ ಹರಿಶ್ಚಂದ್ರ ಶಾಂಡಗೆ, ಭರತ ಕುರಬೆಟ್ಟಿ, ಸಂಜಯ ಮೊಳವಾಡೆ, ರಾವಸಾಹೇಬ ಪಾಟೀಲ, ಸಚಿನ ಹಾಲಪ್ಪನವರ, ಪ್ರವೀನ ಪಾಟೀಲ, ಅವಿನಾಶ ಪಾಟೀಲ, ಶೇಖರ ಪಾಟೀಲ, ಗಣೇಶ ಖಡೇದ, ರುದ್ರಕುಮಾರ ಕೋಠಿವಾಲೆ, ಸಂಜಯ ಶಿಂತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ‘ಎಲ್ಲರೂ ಒಂದೊಂದು ಕ್ಷೇತ್ರದಲ್ಲಿ ಪಾರಂಗತರಾಗಿರುತ್ತಾರೆ. ಆದರೆ ನಮ್ಮ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರದಲ್ಲೂ ಪರಿಣತರಾಗಬೇಕು ಎಂಬುದು ನಮ್ಮ ಆಸೆ’ ಎಂದು ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಚೇರಮನ್ ಚಂದ್ರಕಾಂತ ಕೋಠಿವಾಲೆ ಹೇಳಿದರು.</p>.<p>ವಿಎಸ್ಎಂನ ಜಿ.ಐ. ಬಾಗೇವಾಡಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ಜರುಗಿದ ಕೃಷಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಯವರೆಗೆ ಸಾಗಿಸುವವರೆಗೆ ರೈತರ ನೋವು, ಕಷ್ಟ-ಸುಖಗಳನ್ನು ತಿಳಿದುಕೊಳ್ಳುವುದು, ಕೃಷಿ ಕುರಿತು ಆಸಕ್ತಿ ಬೆಳೆಸುವುದು, ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಬ್ರ್ಯಾಂಡಿಂಗ್ನೊಂದಿಗೆ ಕೃಷಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳಬೇಕೆಂಬುದೇ ಇಂದಿನ ಕೃಷಿ ಉತ್ಸವದ ಉದ್ದೇಶ. ನಮ್ಮ ವಿದ್ಯಾರ್ಥಿಗಳು ಶಿಕ್ಷಕರಿಂದ ಇವೆಲ್ಲ ವಿಷಯಗಳನ್ನು ತಿಳಿದುಕೊಂಡರು’ ಎಂದರು.</p>.<p>ಗಣ್ಯರು ಎತ್ತಿನಗಾಡಿಯಲ್ಲಿ ಬಂದು ಗಮನ ಸೆಳೆದರು. ಚೇರ್ಮನ್ ಚಂದ್ರಕಾಂತ ಕೋಠಿವಾಲೆ ಹಾಗೂ ನಿರ್ದೇಶಕ ಆನಂದ ಗಿಂಡೆ ಕೊಡಲಿಯಿಂದ ಹುಲ್ಲು ಕತ್ತರಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಗಣ್ಯರು ವಿದ್ಯಾರ್ಥಿಗಳಿಂದ ತರಕಾರಿಗಳನ್ನು ಕೊಂಡುಕೊಂಡರು.</p>.<p>ವೈಸ್- ಚೇರ್ಮನ್ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ನಿರ್ದೇಶಕ ಹರಿಶ್ಚಂದ್ರ ಶಾಂಡಗೆ, ಭರತ ಕುರಬೆಟ್ಟಿ, ಸಂಜಯ ಮೊಳವಾಡೆ, ರಾವಸಾಹೇಬ ಪಾಟೀಲ, ಸಚಿನ ಹಾಲಪ್ಪನವರ, ಪ್ರವೀನ ಪಾಟೀಲ, ಅವಿನಾಶ ಪಾಟೀಲ, ಶೇಖರ ಪಾಟೀಲ, ಗಣೇಶ ಖಡೇದ, ರುದ್ರಕುಮಾರ ಕೋಠಿವಾಲೆ, ಸಂಜಯ ಶಿಂತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>