ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆಗೆ ಗುರುವಾರ ಭೇಟಿ ನೀಡಿದ ಮಾತನಾಡಿದ ಅವರು, ‘ಲಕ್ಷ್ಮಿ ಹೆಬ್ಬಾಳಕರ ಸಹೋದರಿ ಸ್ಥಾನದಲ್ಲಿ ನಿಂತು ನಮಗೆ ನ್ಯಾಯ ಕೊಡಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಅವರ ಬಳಿ ಮಾತನಾಡಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ. ವಿಶೇಷ ನ್ಯಾಯಾಲಯ ಕೂಡ ಸ್ಥಾಪನೆ ಮಾಡಲು ಕಾರಣರಾಗಿದ್ದಾರೆ. ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮನೆಗೆ ಬಂದು ಸಾಂತ್ವನ ಹೇಳಿದರು. ನುಡಿದಂತೆ ನಡೆದ ಹೆಬ್ಬಾಳಕರ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.