ಬೆಳಗಾವಿ: ಕಾರ್ಮಿಕರು, ಜನಸಾಮಾನ್ಯರು ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾದ ನಿಲುವು ತಳೆದಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಕಾರ್ಮಿಕ ಸಂಘಟನೆಗಳು ದೇಶದಾದ್ಯಂತ ಕರೆ ನೀಡಿರುವ ಮುಷ್ಕರ ಬೆಂಬಲಿಸಿ, ನಗರ ಹಾಗೂ ಜಿಲ್ಲೆಯಲ್ಲೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ಬಂದ್ ಇರುವುದಿಲ್ಲವಾದ್ದರಿಂದ, ಜನಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇಲ್ಲ.