ಸಕ್ಕರೆ ಕಾರ್ಖಾನೆಯಲ್ಲಿ ತೂಕದಲ್ಲಿ ಮೋಸವಾಗುತ್ತಿರುವ ಕುರಿತು ಆರೋಪಗಳು ಕೇಳಿ ಬರುತ್ತಿವೆ. ಮುಂದಿನ ಕಬ್ಬು ಕಟಾವು ಹಂಗಾಮಿಗೆ ಸರ್ಕಾರ ವತಿಯಿಂದ ತೂಕದ ಯಂತ್ರ ಅಳವಡಿಕೆ ಮಾಡಲಾಗುವುದು. ತಾಲ್ಲೂಕಿನ ಎಪಿಎಂಸಿ ತೂಕದ ಯಂತ್ರದಲ್ಲಿ ತೂಕ ಮಾಡಿಕೊಂಡು ನಂತರ ಕಾರ್ಖಾನೆಗಳಿಗೆ ರೈತರು ಕಬ್ಬು ಸರಬರಾಜು ಮಾಡಬೇಕು. ಸಕ್ಕರೆ ಕಾರ್ಖಾನೆ ಮೋಸ ಮಾಡದಲ್ಲಿ ಲೈಸೆನ್ಸ್ ರದ್ದು ಮಾಡಲಾಗುವುದು. ಮುಂದಿನ ವರ್ಷ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆ ಮಾಡಲಾಗುವುದು’ ಎಂದು ಹೇಳಿದರು.