ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಬಂದ್‌ ವೇಳೆ ಬಸ್‌ ಸಂಚಾರಕ್ಕಿಲ್ಲ ಅಡ್ಡಿ

Published 29 ಸೆಪ್ಟೆಂಬರ್ 2023, 6:21 IST
Last Updated 29 ಸೆಪ್ಟೆಂಬರ್ 2023, 6:21 IST
ಅಕ್ಷರ ಗಾತ್ರ

ಬೆಳಗಾವಿ: ಕಾವೇರಿ ನೀರು ಹರಿಸುವ ಸಂಬಂಧ ವಿವಿಧ ಸಂಘಟನೆಗಳು ಸೆ. 29ರಂದು ಕರ್ನಾಟಕ ಬಂದ್ ಕರೆ ನೀಡಿವೆ. ಆದರೆ, ಜಿಲ್ಲೆಯಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್‌ಗಳು ಯಥಾ ಪ್ರಕಾರ ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ವಿಭಾಗೀಯ ಸಂಚಾರ ಅಧಿಕಾರಿ ಕೆ.ಕೆ.ಲಮಾನಿ ತಿಳಿಸಿದ್ದಾರೆ.

ಬಂದ್‌ ಬೆಂಬಲಿಸಿ ಯಾವುದೇ ಶಾಲೆ, ಕಾಲೇಜು ಕೂಡ ರಜೆ ಘೋಷಣೆ ಮಾಡಿಲ್ಲ. ಬಿಜೆಪಿ, ಜೆಡಿಎಸ್‌ ಹಾಗೂ ಕೆಲವು ಸಂಘಟನೆಗಳು ಮಾತ್ರ ಬಂದ್‌ನಲ್ಲಿ ಪಾಲ್ಗೊಳ್ಳಲಿವೆ.

ಪರೀಕ್ಷೆ ಮುಂದೂಡಿಕೆ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಸೆ.29ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ, ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಗುರುವಾರ ಆದೇಶ ಹೊರಡಿಸಿದೆ.

ಸ್ನಾತಕ ವಿಭಾಗದ 2, 4 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಅಕ್ಟೋಬರ್ 30ಕ್ಕೆ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಶಿವಾನಂದ ಗೋರನಾಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT