ಇದರೊಂದಿಗೆ, ಕೆರೆಯ ಅಂಗಳ ಪ್ರವೇಶಿಸಲು ಶುಲ್ಕ ವಿಧಿಸಿದ್ದ ಹಿಂದಿನ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಅವರ ಆದೇಶದ ವಿರುದ್ಧ ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು ನಡೆಸಿದ್ದ ಹೋರಾಟಕ್ಕೆ ಭಾಗಶಃ ಜಯ ದೊರೆತಂತಾಗಿದೆ. ಬೆಳಿಗ್ಗೆ 5ರಿಂದ 8ರವರೆಗೆ ಕೆರೆ ಆವರಣದಲ್ಲಿ ವಾಕ್ ಮಾಡುವವರಿಗೆ ಶುಲ್ಕದಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ. ಬೆಳಿಗ್ಗೆ 8ರ ನಂತರ ಶುಲ್ಕ ಭರಿಸಿಯೇ ಪ್ರವೇಶಿಸಬೇಕಾಗುತ್ತದೆ.