<p><strong>ಬೆಳಗಾವಿ: </strong>‘ಇಲ್ಲಿನ ಬಾಕ್ಸೈಟ್ ರಸ್ತೆ ಪಕ್ಕದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಬಡಾವಣೆಗೆ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಅಲ್ಲಿನ ನಿವಾಸಿಗಳ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಪಟ್ಕಲ್ ಆಗ್ರಹಿಸಿದರು.</p>.<p>‘12 ವರ್ಷಗಳ ಹಿಂದೆಯೇ ಈ ಬಡಾವಣೆ ನಿರ್ಮಾಣವಾಗಿದೆ. ಆಗಿನಿಂದಲೂ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದೇವೆ. ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಈ ಬಡಾವಣೆ ಬುಡಾ ವ್ಯಾಪ್ತಿಯಲ್ಲಿ ಬರುತ್ತದೆ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ನಗರಪಾಲಿಕೆ ಹಾಗೂ ಬುಡಾ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ರಹವಾಸಿಗಳು ಪರದಾಡುವಂತಾಗಿದೆ’ ಎಂದು ಆರೋಪಿಸಿದರು.</p>.<p>‘ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಮನಕ್ಕೂ ತಂದಿದ್ದೆವು. ಸಮಸ್ಯೆ ಪರಿಹರಿಸುವಂತೆ ಅವರು ಸೂಚಿಸಿ 8 ತಿಂಗಳುಗಳು ಕಳೆದಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ. ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಈಶ್ವರ ಗಾಣಿಗೇರ, ಅರವಿಂದ ಜೋಶಿ, ಅಭಿನಯ ಸೋಲಿ, ಯಲ್ಲಪ್ಪ ಪಾಟೀಲ, ಮಹಾದೇವ ಹೊಂಗಲ, ಬಿ.ಜಿ. ಪಟ್ಟಣಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಇಲ್ಲಿನ ಬಾಕ್ಸೈಟ್ ರಸ್ತೆ ಪಕ್ಕದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಬಡಾವಣೆಗೆ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಅಲ್ಲಿನ ನಿವಾಸಿಗಳ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಪಟ್ಕಲ್ ಆಗ್ರಹಿಸಿದರು.</p>.<p>‘12 ವರ್ಷಗಳ ಹಿಂದೆಯೇ ಈ ಬಡಾವಣೆ ನಿರ್ಮಾಣವಾಗಿದೆ. ಆಗಿನಿಂದಲೂ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದೇವೆ. ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಈ ಬಡಾವಣೆ ಬುಡಾ ವ್ಯಾಪ್ತಿಯಲ್ಲಿ ಬರುತ್ತದೆ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ನಗರಪಾಲಿಕೆ ಹಾಗೂ ಬುಡಾ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ರಹವಾಸಿಗಳು ಪರದಾಡುವಂತಾಗಿದೆ’ ಎಂದು ಆರೋಪಿಸಿದರು.</p>.<p>‘ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಮನಕ್ಕೂ ತಂದಿದ್ದೆವು. ಸಮಸ್ಯೆ ಪರಿಹರಿಸುವಂತೆ ಅವರು ಸೂಚಿಸಿ 8 ತಿಂಗಳುಗಳು ಕಳೆದಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ. ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ನಿವಾಸಿಗಳು ಖಾಲಿ ಕೊಡಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಈಶ್ವರ ಗಾಣಿಗೇರ, ಅರವಿಂದ ಜೋಶಿ, ಅಭಿನಯ ಸೋಲಿ, ಯಲ್ಲಪ್ಪ ಪಾಟೀಲ, ಮಹಾದೇವ ಹೊಂಗಲ, ಬಿ.ಜಿ. ಪಟ್ಟಣಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>