ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಲಸೆ ಕಾರ್ಮಿಕರನ್ನು ಅವರವರ ರಾಜ್ಯಕ್ಕೆ ಕಳುಹಿಸಲು ಅನುಮತಿ ನೀಡಿ ಕೇಂದ್ರ ಗೃಹ ಇಲಾಖೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ರೈಲಿನಲ್ಲಿ ವಲಸೆ ಕಾರ್ಮಿಕರನ್ನು ಅವರವರ ರಾಜ್ಯಕ್ಕೆ ಕಳುಹಿಸಲಾಗುವುದು. ಇದನ್ನು ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ’ ಎಂದು ಹೇಳಿದರು.