<p><strong>ಬೆಳಗಾವಿ:</strong> 'ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯರ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಮರಿಗೆ ಕೊಡುವುದಿಲ್ಲ' ಎಂದು ಹೇಳಿದರು.</p>.<p>'ಹಿಂದೂಗಳಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಡಿ.4ರಂದು ಇಲ್ಲಿ ಸಮನ್ವಯ ಸಮಿತಿ ಸಭೆ ಹಾಗೂ ಡಿ. 5ರಂದು ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಆ ಸಭೆಗಳಲ್ಲಿ ಅಭ್ಯರ್ಥಿಗಳ ವಿಷಯ ಚರ್ಚೆಗೆ ಬರಬಹುದು' ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯರ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಮರಿಗೆ ಕೊಡುವುದಿಲ್ಲ' ಎಂದು ಹೇಳಿದರು.</p>.<p>'ಹಿಂದೂಗಳಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಡಿ.4ರಂದು ಇಲ್ಲಿ ಸಮನ್ವಯ ಸಮಿತಿ ಸಭೆ ಹಾಗೂ ಡಿ. 5ರಂದು ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಆ ಸಭೆಗಳಲ್ಲಿ ಅಭ್ಯರ್ಥಿಗಳ ವಿಷಯ ಚರ್ಚೆಗೆ ಬರಬಹುದು' ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>