<p><strong>ಬೆಳಗಾವಿ</strong>: ‘ಜೆಡಿಎಸ್ ತೊರೆದು ಹಲವರು ಕಾಂಗ್ರೆಸ್ ಸೇರುವರೆಂದು 6 ತಿಂಗಳಿನಿಂದ ಹೇಳಲಾಗುತ್ತಿದೆ. ಆದರೆ, ಜೆಡಿಎಸ್ ಗಟ್ಟಿಯಾಗಿದ್ದು ಯಾರೂ ಕೂಡ ಪಕ್ಷ ತೊರೆಯಲ್ಲ. ಕಾಂಗ್ರೆಸ್ಗೆ ಭ್ರಮನಿರಸನವಾಗಲಿದೆ’ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.</p>.<p>‘ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಅವಧಿಗೆ ಮುಂದುವರಿಯಬೇಕು. ಕರ್ನಾಟಕದಲ್ಲಿ ಜೆಡಿಎಸ್ ಇನ್ನಷ್ಟು ಬಲಿಷ್ಠಗೊಂಡು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಭೀಕರ ಬರದಿಂದ ರಾಜ್ಯದಲ್ಲಿ ಸುಮಾರು ₹4,800 ಕೋಟಿಯಷ್ಟು ಹಾನಿಯಾಗಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರ ಒಂದು ರೂಪಾಯಿ ಪರಿಹಾರವನ್ನೂ ಬಿಡುಗಡೆಗೊಳಿಸಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕುಳಿತಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಜೆಡಿಎಸ್ ತೊರೆದು ಹಲವರು ಕಾಂಗ್ರೆಸ್ ಸೇರುವರೆಂದು 6 ತಿಂಗಳಿನಿಂದ ಹೇಳಲಾಗುತ್ತಿದೆ. ಆದರೆ, ಜೆಡಿಎಸ್ ಗಟ್ಟಿಯಾಗಿದ್ದು ಯಾರೂ ಕೂಡ ಪಕ್ಷ ತೊರೆಯಲ್ಲ. ಕಾಂಗ್ರೆಸ್ಗೆ ಭ್ರಮನಿರಸನವಾಗಲಿದೆ’ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.</p>.<p>‘ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಅವಧಿಗೆ ಮುಂದುವರಿಯಬೇಕು. ಕರ್ನಾಟಕದಲ್ಲಿ ಜೆಡಿಎಸ್ ಇನ್ನಷ್ಟು ಬಲಿಷ್ಠಗೊಂಡು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಭೀಕರ ಬರದಿಂದ ರಾಜ್ಯದಲ್ಲಿ ಸುಮಾರು ₹4,800 ಕೋಟಿಯಷ್ಟು ಹಾನಿಯಾಗಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರ ಒಂದು ರೂಪಾಯಿ ಪರಿಹಾರವನ್ನೂ ಬಿಡುಗಡೆಗೊಳಿಸಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕುಳಿತಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>