<p><strong>ಅಥಣಿ:</strong> ಇಲ್ಲಿನ ಕೃಷ್ಣಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.</p>.<p>ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ರೈತ ಸಹಕಾರಿ ಪೆನಲ್ನವರು ಬುಧವಾರ ನಾಮಪತ್ರ ಸಲ್ಲಿಸಿದರು.</p>.<p>ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸವದಿ, ‘2020–25ನೇ ಸಾಲಿನ ಚುನಾವಣೆಗೆ ರೈತ ಸಹಕಾರಿ ಪೆನಲ್ನ 16 ಮಂದಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ’ ಎಂದರು.</p>.<p>‘ಸಹಕಾರ ಕ್ಷೇತ್ರಗಳ ಬೆಳವಣಿಗೆ ಬಗ್ಗೆ ವೈದ್ಯನಾಥನ್ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಈ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಶಿಫಾರಸು ಮಾಡಿದ್ದಾರೆ. ರೈತರಿಗೆ ಮುಕ್ತವಾಗಿ ಸಹಕಾರಿ ಕ್ಷೇತ್ರದ ಮಾಹಿತಿ ಇರಲೆಂದು ಈ ವರದಿ ಆಧರಿಸಿ, ಕೇಂದ್ರವು ಆಯೋಗ ರಚಿಸಿದೆ. ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮೊದಲಿಗೆ ಜಾರಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಷೇರು ಹೊಂದಿರುವ ಸಹಕಾರಿ ಸಂಘದ ಸದಸ್ಯ ಕನಿಷ್ಠ ಮೂರು ಸಾಮಾನ್ಯ ಸಭೆಗಾದರೂ ಹಾಜರಾಗಬೇಕು. ಯಾರು ಹಾಜರಾಗುವುದಿಲ್ಲವೋ ಅವರ ಸದಸ್ಯತ್ವ ತೆಗೆಯಬೇಕು ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ, ಸದ್ಯಸ್ಯತ್ವ ರದ್ದತಿಗೆ ವಿರೋಧ ವ್ಯಕ್ತಪಡಿಸಿದ್ದೇನೆ. ಉಳಿದಂತೆ ವರದಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.</p>.<p>‘ಕಾರ್ಖಾನೆ ಈಗಾಗಲೆ ₹ 39 ಕೋಟಿ ನಷ್ಟ ಅನುಭವಿಸಿದೆ. ಕೇಂದ್ರದಿಂದ ಸಬ್ಸಿಡಿ ಬಂದರೆ ಎಲ್ಲವೂ ಸರಿಯಾಗುತ್ತದೆ. ಬಾಕಿ ಉಳಿದ ಹಣವನ್ನೂ ಕೊಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ರೈತರಿಗೆ ಈ ಕಾರ್ಖಾನೆ ಕಾಮಧೇನು ಆಗಿದೆ. ಪರಪ್ಪ ಸವದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ’ ಎಂದು ಹೇಳಿದರು.</p>.<p>ಮುಖಂಡರಾದ ಶಾಂತಿನಾಥ ನಂದೇಶ್ವರ, ಗುಳಪ್ಪ ಜತ್ತಿ, ಮಲ್ಲೇಶ ಸವದಿ, ಶಿವಾನಂದ ಸವದಿ, ಚಿದಾನಂದ ಸವದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ಇಲ್ಲಿನ ಕೃಷ್ಣಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.</p>.<p>ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ರೈತ ಸಹಕಾರಿ ಪೆನಲ್ನವರು ಬುಧವಾರ ನಾಮಪತ್ರ ಸಲ್ಲಿಸಿದರು.</p>.<p>ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸವದಿ, ‘2020–25ನೇ ಸಾಲಿನ ಚುನಾವಣೆಗೆ ರೈತ ಸಹಕಾರಿ ಪೆನಲ್ನ 16 ಮಂದಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ’ ಎಂದರು.</p>.<p>‘ಸಹಕಾರ ಕ್ಷೇತ್ರಗಳ ಬೆಳವಣಿಗೆ ಬಗ್ಗೆ ವೈದ್ಯನಾಥನ್ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಈ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಶಿಫಾರಸು ಮಾಡಿದ್ದಾರೆ. ರೈತರಿಗೆ ಮುಕ್ತವಾಗಿ ಸಹಕಾರಿ ಕ್ಷೇತ್ರದ ಮಾಹಿತಿ ಇರಲೆಂದು ಈ ವರದಿ ಆಧರಿಸಿ, ಕೇಂದ್ರವು ಆಯೋಗ ರಚಿಸಿದೆ. ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮೊದಲಿಗೆ ಜಾರಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಷೇರು ಹೊಂದಿರುವ ಸಹಕಾರಿ ಸಂಘದ ಸದಸ್ಯ ಕನಿಷ್ಠ ಮೂರು ಸಾಮಾನ್ಯ ಸಭೆಗಾದರೂ ಹಾಜರಾಗಬೇಕು. ಯಾರು ಹಾಜರಾಗುವುದಿಲ್ಲವೋ ಅವರ ಸದಸ್ಯತ್ವ ತೆಗೆಯಬೇಕು ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ, ಸದ್ಯಸ್ಯತ್ವ ರದ್ದತಿಗೆ ವಿರೋಧ ವ್ಯಕ್ತಪಡಿಸಿದ್ದೇನೆ. ಉಳಿದಂತೆ ವರದಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.</p>.<p>‘ಕಾರ್ಖಾನೆ ಈಗಾಗಲೆ ₹ 39 ಕೋಟಿ ನಷ್ಟ ಅನುಭವಿಸಿದೆ. ಕೇಂದ್ರದಿಂದ ಸಬ್ಸಿಡಿ ಬಂದರೆ ಎಲ್ಲವೂ ಸರಿಯಾಗುತ್ತದೆ. ಬಾಕಿ ಉಳಿದ ಹಣವನ್ನೂ ಕೊಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ರೈತರಿಗೆ ಈ ಕಾರ್ಖಾನೆ ಕಾಮಧೇನು ಆಗಿದೆ. ಪರಪ್ಪ ಸವದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ’ ಎಂದು ಹೇಳಿದರು.</p>.<p>ಮುಖಂಡರಾದ ಶಾಂತಿನಾಥ ನಂದೇಶ್ವರ, ಗುಳಪ್ಪ ಜತ್ತಿ, ಮಲ್ಲೇಶ ಸವದಿ, ಶಿವಾನಂದ ಸವದಿ, ಚಿದಾನಂದ ಸವದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>