ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥಣಿ ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

Last Updated 4 ನವೆಂಬರ್ 2020, 13:45 IST
ಅಕ್ಷರ ಗಾತ್ರ

ಅಥಣಿ: ಇಲ್ಲಿನ ಕೃಷ್ಣಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ರೈತ ಸಹಕಾರಿ ಪೆನಲ್‌ನವರು ಬುಧವಾರ ನಾಮಪತ್ರ ಸಲ್ಲಿಸಿದರು.

ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸವದಿ, ‘2020–25ನೇ ಸಾಲಿನ ಚುನಾವಣೆಗೆ ರೈತ ಸಹಕಾರಿ ಪೆನಲ್‌ನ 16 ಮಂದಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ’ ಎಂದರು.

‘ಸಹಕಾರ ಕ್ಷೇತ್ರಗಳ ಬೆಳವಣಿಗೆ ಬಗ್ಗೆ ವೈದ್ಯನಾಥನ್ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಈ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಶಿಫಾರಸು ಮಾಡಿದ್ದಾರೆ. ರೈತರಿಗೆ ಮುಕ್ತವಾಗಿ ಸಹಕಾರಿ ಕ್ಷೇತ್ರದ ಮಾಹಿತಿ ಇರಲೆಂದು ಈ ವರದಿ ಆಧರಿಸಿ, ಕೇಂದ್ರವು ಆಯೋಗ ರಚಿಸಿದೆ. ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮೊದಲಿಗೆ ಜಾರಿ ಮಾಡಲಾಗಿದೆ’ ಎಂದು ತಿಳಿಸಿದರು.

‘ಷೇರು ಹೊಂದಿರುವ ಸಹಕಾರಿ ಸಂಘದ ಸದಸ್ಯ ಕನಿಷ್ಠ ಮೂರು ಸಾಮಾನ್ಯ ಸಭೆಗಾದರೂ ಹಾಜರಾಗಬೇಕು. ಯಾರು ಹಾಜರಾಗುವುದಿಲ್ಲವೋ ಅವರ ಸದಸ್ಯತ್ವ ತೆಗೆಯಬೇಕು ಎಂದು ವರದಿಯಲ್ಲಿ ಹೇಳಲಾಗಿದೆ. ಆದರೆ, ಸದ್ಯಸ್ಯತ್ವ ರದ್ದತಿಗೆ ವಿರೋಧ ವ್ಯಕ್ತಪಡಿಸಿದ್ದೇನೆ. ಉಳಿದಂತೆ ವರದಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

‘ಕಾರ್ಖಾನೆ ಈಗಾಗಲೆ ₹ 39 ಕೋಟಿ ನಷ್ಟ ಅನುಭವಿಸಿದೆ. ಕೇಂದ್ರದಿಂದ ಸಬ್ಸಿಡಿ ಬಂದರೆ ಎಲ್ಲವೂ ಸರಿಯಾಗುತ್ತದೆ. ಬಾಕಿ ಉಳಿದ ಹಣವನ್ನೂ ಕೊಡಲಾಗುವುದು’ ಎಂದು ಮಾಹಿತಿ ನೀಡಿದರು.

ಶಾಸಕ ಮಹೇಶ ಕುಮಠಳ್ಳಿ, ‘ರೈತರಿಗೆ ಈ ಕಾರ್ಖಾನೆ ಕಾಮಧೇನು ಆಗಿದೆ. ಪರಪ್ಪ ಸವದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ’ ಎಂದು ಹೇಳಿದರು.

ಮುಖಂಡರಾದ ಶಾಂತಿನಾಥ ನಂದೇಶ್ವರ, ಗುಳಪ್ಪ ಜತ್ತಿ, ಮಲ್ಲೇಶ ಸವದಿ, ಶಿವಾನಂದ ಸವದಿ, ಚಿದಾನಂದ ಸವದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT