<p><strong>ಬೆಳಗಾವಿ:</strong> ‘ಶಾಸಕ, ಸಹೋದರ ರಮೇಶ ಜಾರಕಿಹೊಳಿಗೆ ಪಕ್ಷ ಬಿಡುವಂತೆ ಯಾರೂ ಹೇಳಿಲ್ಲ. ಪಕ್ಷದ ಕಾರ್ಯಕರ್ತರಾಗಲಿ, ಸಿದ್ದರಾಮಯ್ಯ ಅವರಾಗಲಿ ಯಾರೂ ಹೇಳಿಲ್ಲ. ಪಕ್ಷದಲ್ಲಿ ಇರುವುದು, ಬಿಡುವುದು ಅವರಿಗೆ ಬಿಟ್ಟಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಮೇಶ ಅವರ ಜೊತೆ ಮಾತನಾಡುವುದು ಮುಗಿದ ಅಧ್ಯಾಯ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವೇ? ಅವರು ಯಾವಾಗ ಪಕ್ಷ ಬಿಡುತ್ತಾರೆ, ಯಾವಾಗ ಮಂತ್ರಿಯಾಗುತ್ತಾರೆ ಎನ್ನುವುದನ್ನು ನೀವೇ (ಪತ್ರಕರ್ತರಿಗೆ) ಕೇಳಿ’ ಎಂದು ಪ್ರತ್ಯುತ್ತರ ನೀಡಿದರು.</p>.<p>‘ರಮೇಶ ಮಂತ್ರಿಯಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದರು. ಇವರನ್ನು ಯಾರು ಸಂಭಾಳಿಸುವರು’ ಎಂದರು.</p>.<p><strong>ರಮೇಶ ಗೈರು:</strong></p>.<p>ಕೃಷ್ಣಾ ನದಿಗೆ ನೀರು ಹರಿಸುವ ಸಂಬಂಧ ನಗರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಗೆ ಶಾಸಕ ರಮೇಶ ಜಾರಕಿಹೊಳಿ ಗೈರಾಗಿದ್ದರು. ಕೃಷ್ಣಾ ನದಿ ಹರಿಯುವ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯನ್ನು ಶಿವಕುಮಾರ್ ನಡೆಸಿದ್ದರು.</p>.<p>ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್– ಬಿಜೆಪಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ರಮೇಶ ಮಾತ್ರ ಗೈರಾಗಿದ್ದರು.</p>.<p><strong>ಸತೀಶ ಮೈದಡವಿದ ಡಿಕೆಶಿ:</strong></p>.<p>ಜನಪ್ರತಿನಿಧಿಗಳ ಸಭೆ ಆರಂಭವಾಗುವುದಕ್ಕಿಂತ ಮುಂಚೆ ಡಿ.ಕೆ. ಶಿವಕುಮಾರ್ ಅವರು ಪಕ್ಕದಲ್ಲಿಯೇ ಕುಳಿತಿದ್ದ ಸಚಿವ ಸತೀಶ ಜಾರಕಿಹೊಳಿ ಅವರ ಮೈದಡವಿ ಮಾತನಾಡಿಸಿದರು. ‘ಗಂಭೀರವಾಗಿ ಕುಳಿತಿರುವ ಇವರು ನಗುವುದನ್ನು ತೋರಿಸಿ’ ಎಂದು ಛಾಯಾಗ್ರಾಹಕರಿಗೆ ಹೇಳಿದರು. ಸತೀಶ ಮುಗುಳನಗೆ ಬೀರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಶಾಸಕ, ಸಹೋದರ ರಮೇಶ ಜಾರಕಿಹೊಳಿಗೆ ಪಕ್ಷ ಬಿಡುವಂತೆ ಯಾರೂ ಹೇಳಿಲ್ಲ. ಪಕ್ಷದ ಕಾರ್ಯಕರ್ತರಾಗಲಿ, ಸಿದ್ದರಾಮಯ್ಯ ಅವರಾಗಲಿ ಯಾರೂ ಹೇಳಿಲ್ಲ. ಪಕ್ಷದಲ್ಲಿ ಇರುವುದು, ಬಿಡುವುದು ಅವರಿಗೆ ಬಿಟ್ಟಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಮೇಶ ಅವರ ಜೊತೆ ಮಾತನಾಡುವುದು ಮುಗಿದ ಅಧ್ಯಾಯ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವೇ? ಅವರು ಯಾವಾಗ ಪಕ್ಷ ಬಿಡುತ್ತಾರೆ, ಯಾವಾಗ ಮಂತ್ರಿಯಾಗುತ್ತಾರೆ ಎನ್ನುವುದನ್ನು ನೀವೇ (ಪತ್ರಕರ್ತರಿಗೆ) ಕೇಳಿ’ ಎಂದು ಪ್ರತ್ಯುತ್ತರ ನೀಡಿದರು.</p>.<p>‘ರಮೇಶ ಮಂತ್ರಿಯಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದರು. ಇವರನ್ನು ಯಾರು ಸಂಭಾಳಿಸುವರು’ ಎಂದರು.</p>.<p><strong>ರಮೇಶ ಗೈರು:</strong></p>.<p>ಕೃಷ್ಣಾ ನದಿಗೆ ನೀರು ಹರಿಸುವ ಸಂಬಂಧ ನಗರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಗೆ ಶಾಸಕ ರಮೇಶ ಜಾರಕಿಹೊಳಿ ಗೈರಾಗಿದ್ದರು. ಕೃಷ್ಣಾ ನದಿ ಹರಿಯುವ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯನ್ನು ಶಿವಕುಮಾರ್ ನಡೆಸಿದ್ದರು.</p>.<p>ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್– ಬಿಜೆಪಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ರಮೇಶ ಮಾತ್ರ ಗೈರಾಗಿದ್ದರು.</p>.<p><strong>ಸತೀಶ ಮೈದಡವಿದ ಡಿಕೆಶಿ:</strong></p>.<p>ಜನಪ್ರತಿನಿಧಿಗಳ ಸಭೆ ಆರಂಭವಾಗುವುದಕ್ಕಿಂತ ಮುಂಚೆ ಡಿ.ಕೆ. ಶಿವಕುಮಾರ್ ಅವರು ಪಕ್ಕದಲ್ಲಿಯೇ ಕುಳಿತಿದ್ದ ಸಚಿವ ಸತೀಶ ಜಾರಕಿಹೊಳಿ ಅವರ ಮೈದಡವಿ ಮಾತನಾಡಿಸಿದರು. ‘ಗಂಭೀರವಾಗಿ ಕುಳಿತಿರುವ ಇವರು ನಗುವುದನ್ನು ತೋರಿಸಿ’ ಎಂದು ಛಾಯಾಗ್ರಾಹಕರಿಗೆ ಹೇಳಿದರು. ಸತೀಶ ಮುಗುಳನಗೆ ಬೀರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>