<p><strong>ಬೆಳಗಾವಿ</strong>: ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯವರು ಶುಕ್ರವಾರ ಬೆಳಿಗ್ಗೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಿದರು.</p>.<p>ಆ ಗ್ರಾಮದ ಬೈಲಹೊಂಗಲ ಬಸ್ ನಿಲ್ದಾಣ ಸಮೀಪದ ಭಡಕಲ್ ಬಿದಿಯ ಮುಖ್ಯ ರಸ್ತೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ಹಾಗೂ ಕಾರ್ಯದರ್ಶಿ ಶ್ರೀಕಾಂತ ಮಾಧುಭರಮಣ್ಣವರ ನೇತೃತ್ವದಲ್ಲಿ ರಾಷ್ಟ್ರಗೀತೆಯೊಂದಿಗೆ ಧ್ವಜಾರೋಹಣ ನೆರವೇರಿಸಲಾಯಿತು.</p>.<p>ತಕ್ಷಣ ಬಂದ ಪೊಲೀಸರು, ಆ ಧ್ವಜ ತೆರವುಗೊಳಿಸಿ ಹೋರಾಟಗಾರರನ್ನು ತಮ್ಮ ವಶಕ್ಕೆ ಪಡೆದರು.</p>.<p>ಈ ವೇಳೆ ಮಾತನಾಡಿದ ಅಡಿವೇಶ ಇಟಗಿ, ‘ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಹೀಗಾಗಿ, ಪ್ರತ್ಯೇಕ ರಾಜ್ಯ ಆಗುವವರೆಗೂ ನಮ್ಮ ಹೋರಾಟ ನಿಲ್ಲದು. ಈ ಧ್ವಜಾರೋಹಣ 3ನೇ ಬಾರಿಗೆ ಮಾಡುತ್ತದ್ದೇವೆ. ನಾವು ಕನ್ನಡ ವಿರೋಧಿಗಳಲ್ಲ. ಆದರೆ, ನಮಗೆ ಅಭಿವೃದ್ಧಿ ಬೇಕಿದೆ. ಆದರೆ, ಸರ್ಕಾರ ಒಬ್ಬರಿಗೆ ಬೆಣ್ಣೆ; ಮತ್ತೊಬ್ಬರಿಗೆ ಸುಣ್ಣ ಹಂಚುತ್ತಾ ಬಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಯದರ್ಶಿ ಶ್ರೀಕಾಂತ ಮಾಧುಭರಮಣ್ಣವರ ಮಾತನಾಡಿ, ‘ಸುವರ್ಣ ವಿಧಾನಸೌಧ ಸಂಪೂರ್ಣ ನಿರುಪಯುಕ್ತವಾಗಿದೆ’ ಎಂದರು.</p>.<p>ಆನಂದಗೌಡ ಪಾಟೀಲ, ಬಸವರಾಜ ಧೂಳಪ್ಪನವರ, ಗಂಗಾಧರ ಅಗಸಿಮನಿ, ಸಮರ್ಥ ಇಟಗಿ, ವಿರೂಪಾಕ್ಷ ರೊಟ್ಟಿ, ಚಂಬಣ್ಣ ವಾಲಿ, ಸಂತೋಷ ಕಾಗತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯವರು ಶುಕ್ರವಾರ ಬೆಳಿಗ್ಗೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಿದರು.</p>.<p>ಆ ಗ್ರಾಮದ ಬೈಲಹೊಂಗಲ ಬಸ್ ನಿಲ್ದಾಣ ಸಮೀಪದ ಭಡಕಲ್ ಬಿದಿಯ ಮುಖ್ಯ ರಸ್ತೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ಹಾಗೂ ಕಾರ್ಯದರ್ಶಿ ಶ್ರೀಕಾಂತ ಮಾಧುಭರಮಣ್ಣವರ ನೇತೃತ್ವದಲ್ಲಿ ರಾಷ್ಟ್ರಗೀತೆಯೊಂದಿಗೆ ಧ್ವಜಾರೋಹಣ ನೆರವೇರಿಸಲಾಯಿತು.</p>.<p>ತಕ್ಷಣ ಬಂದ ಪೊಲೀಸರು, ಆ ಧ್ವಜ ತೆರವುಗೊಳಿಸಿ ಹೋರಾಟಗಾರರನ್ನು ತಮ್ಮ ವಶಕ್ಕೆ ಪಡೆದರು.</p>.<p>ಈ ವೇಳೆ ಮಾತನಾಡಿದ ಅಡಿವೇಶ ಇಟಗಿ, ‘ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಹೀಗಾಗಿ, ಪ್ರತ್ಯೇಕ ರಾಜ್ಯ ಆಗುವವರೆಗೂ ನಮ್ಮ ಹೋರಾಟ ನಿಲ್ಲದು. ಈ ಧ್ವಜಾರೋಹಣ 3ನೇ ಬಾರಿಗೆ ಮಾಡುತ್ತದ್ದೇವೆ. ನಾವು ಕನ್ನಡ ವಿರೋಧಿಗಳಲ್ಲ. ಆದರೆ, ನಮಗೆ ಅಭಿವೃದ್ಧಿ ಬೇಕಿದೆ. ಆದರೆ, ಸರ್ಕಾರ ಒಬ್ಬರಿಗೆ ಬೆಣ್ಣೆ; ಮತ್ತೊಬ್ಬರಿಗೆ ಸುಣ್ಣ ಹಂಚುತ್ತಾ ಬಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಯದರ್ಶಿ ಶ್ರೀಕಾಂತ ಮಾಧುಭರಮಣ್ಣವರ ಮಾತನಾಡಿ, ‘ಸುವರ್ಣ ವಿಧಾನಸೌಧ ಸಂಪೂರ್ಣ ನಿರುಪಯುಕ್ತವಾಗಿದೆ’ ಎಂದರು.</p>.<p>ಆನಂದಗೌಡ ಪಾಟೀಲ, ಬಸವರಾಜ ಧೂಳಪ್ಪನವರ, ಗಂಗಾಧರ ಅಗಸಿಮನಿ, ಸಮರ್ಥ ಇಟಗಿ, ವಿರೂಪಾಕ್ಷ ರೊಟ್ಟಿ, ಚಂಬಣ್ಣ ವಾಲಿ, ಸಂತೋಷ ಕಾಗತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>