ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಬರಹ: ಸಾಧುನವರಗೆ ನೋಟಿಸ್

Last Updated 16 ಏಪ್ರಿಲ್ 2019, 10:41 IST
ಅಕ್ಷರ ಗಾತ್ರ

ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನ ಮಾಡಲಾಗಿದೆ ಎಂದು ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

‘ಸಾಧುನವರ ಅಭಿಮಾನಿಗಳ ಬಳಗ ಮತ್ತು ಸಾಧುನವರ ಯೂತ್ ಬ್ರಿಗೇಡ್ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ತಮ್ಮ ಬಗ್ಗೆ ಹಾಗೂ ಬಿಜೆಪಿ ರಾಜ್ಯ ಘಟಕದ ಸಹ ವಕ್ತಾರೆ ಮಾಳವಿಕಾ ಅವಿನಾಶ್‌ ವಿರುದ್ಧ ಅವಹೇಳನಕಾರಿ ಬರಹ ಹಾಕಲಾಗಿದೆ. ಫೋಟೊ ಕೂಡ ಬಳಸಲಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯು ಕಾಂಗ್ರೆಸ್‌ ಅಭ್ಯರ್ಥಿ ಡಾ.ವಿ.ಡಿ. ಸಾಧುನವರ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ತಕ್ಷಣ ವಿವರಣೆ ನೀಡುವಂತೆ ಹಾಗೂ ಉತ್ತರಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT