<p><strong>ಸವದತ್ತಿ</strong>: ನರೇಗಾದಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇರುವ 24 ಗ್ರಾಮ ಪಂಚಾಯತಿಗಳಲ್ಲಿ ಸ್ತ್ರೀ ಚೇತನ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ನರೇಗಾ ಎಡಿ ಆರ್.ಬಿ. ರಕ್ಕಸಗಿ ಹೇಳಿದರು.</p>.<p>ತಾಲ್ಲೂಕಿನ ಚುಳಕಿ ಗ್ರಾಮದ ಸಮುದಾಯ ಭವನದಲ್ಲಿ ಬುಧವಾರ ಜರುಗಿದ ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. </p>.<p>ತಾಲ್ಲೂಕಿನ ಉಗರಗೋಳ, ಹಿರೇಕುಂಬಿ, ಅಕ್ಕಿಸಾಗರ, ಹೊಸೂರ, ಮಬನೂರ, ಕಗದಾಳ, ಕರೀಕಟ್ಟಿ, ಶಿರಸಂಗಿ, ಮುಗಳಿಹಾಳ ಸೇರಿ 24 ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದೆ.</p>.<p>₹ 349 ಇದ್ದ ಕೂಲಿ ಮೊತ್ತವನ್ನು ಈಗ ₹ 370ಕ್ಕೇರಿಸಿ ಅನುಕೂಲ ಕಲ್ಪಿಸಿದೆ. ಇದರಿಂದ ದುಡಿಯುವ ಕೈಗಳಿಗೆ ನಿರಂತರ ಕೆಲಸದ ಜೊತೆಗೆ ಆರ್ಥಿಕತೆ ಸದೃಢಗೊಳ್ಳಲಿದೆ. ಗ್ರಾಮಗಳಲ್ಲಿನ ಸ್ವ-ಸಹಾಯ ಸಂಘಗಳಿಗೆ ಹಾಗೂ ಪ್ರತಿ ಮನೆಗೆ ಭೇಟಿ ನೀಡಿ ಈ ಕುರಿತು ಅರಿವು ಮೂಡಿಸುವ ಕಾರ್ಯ ನಡೆದಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸಿ ಆರ್ಥಿಕ ಸ್ವಾವಲಂಬಿಗಳಾಗಲಿದ್ದಾರೆಂದು ತಿಳಿಸಿದರು. </p>.<p>ಬಳಿಕ ಮನರೇಗಾ ಕರಪತ್ರಗಳ್ನು ವಿತರಿಸಲಾಯಿತು. ಈ ವೇಳೆ ಅಧ್ಯಕ್ಷೆ ಯಲ್ಲವ್ವ ಉಪ್ಪಾರ, ಪಿಡಿಒ ಆನಂದ ಸುತಗಟ್ಟಿ, ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ತಾಂತ್ರಿಕ ಸಹಾಯಕ ವಿಜಯ ಪೇಟೆ ಹಾಗೂ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ನರೇಗಾದಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇರುವ 24 ಗ್ರಾಮ ಪಂಚಾಯತಿಗಳಲ್ಲಿ ಸ್ತ್ರೀ ಚೇತನ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ನರೇಗಾ ಎಡಿ ಆರ್.ಬಿ. ರಕ್ಕಸಗಿ ಹೇಳಿದರು.</p>.<p>ತಾಲ್ಲೂಕಿನ ಚುಳಕಿ ಗ್ರಾಮದ ಸಮುದಾಯ ಭವನದಲ್ಲಿ ಬುಧವಾರ ಜರುಗಿದ ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. </p>.<p>ತಾಲ್ಲೂಕಿನ ಉಗರಗೋಳ, ಹಿರೇಕುಂಬಿ, ಅಕ್ಕಿಸಾಗರ, ಹೊಸೂರ, ಮಬನೂರ, ಕಗದಾಳ, ಕರೀಕಟ್ಟಿ, ಶಿರಸಂಗಿ, ಮುಗಳಿಹಾಳ ಸೇರಿ 24 ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದೆ.</p>.<p>₹ 349 ಇದ್ದ ಕೂಲಿ ಮೊತ್ತವನ್ನು ಈಗ ₹ 370ಕ್ಕೇರಿಸಿ ಅನುಕೂಲ ಕಲ್ಪಿಸಿದೆ. ಇದರಿಂದ ದುಡಿಯುವ ಕೈಗಳಿಗೆ ನಿರಂತರ ಕೆಲಸದ ಜೊತೆಗೆ ಆರ್ಥಿಕತೆ ಸದೃಢಗೊಳ್ಳಲಿದೆ. ಗ್ರಾಮಗಳಲ್ಲಿನ ಸ್ವ-ಸಹಾಯ ಸಂಘಗಳಿಗೆ ಹಾಗೂ ಪ್ರತಿ ಮನೆಗೆ ಭೇಟಿ ನೀಡಿ ಈ ಕುರಿತು ಅರಿವು ಮೂಡಿಸುವ ಕಾರ್ಯ ನಡೆದಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸಿ ಆರ್ಥಿಕ ಸ್ವಾವಲಂಬಿಗಳಾಗಲಿದ್ದಾರೆಂದು ತಿಳಿಸಿದರು. </p>.<p>ಬಳಿಕ ಮನರೇಗಾ ಕರಪತ್ರಗಳ್ನು ವಿತರಿಸಲಾಯಿತು. ಈ ವೇಳೆ ಅಧ್ಯಕ್ಷೆ ಯಲ್ಲವ್ವ ಉಪ್ಪಾರ, ಪಿಡಿಒ ಆನಂದ ಸುತಗಟ್ಟಿ, ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ತಾಂತ್ರಿಕ ಸಹಾಯಕ ವಿಜಯ ಪೇಟೆ ಹಾಗೂ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>