‘ಕಾಯಂ ಸಿಬ್ಬಂದಿಗೆ ನೀಡುವ ವೇತನವನ್ನು ನಮಗೂ ಕೊಡಬೇಕು. ನೇರ ನೇಮಕಾತಿ ಮಾಡಿಕೊಳ್ಳುವಾಗ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೃಪಾಂಕ ಕೊಟ್ಟು ಆದ್ಯತೆ ನೀಡಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವುದರಿಂದ ವೇತನದ ಜೊತೆಗೆ ವಿಶೇಷ ಭತ್ಯೆ ಕೊಡಬೇಕು. ಸಮವಸ್ತ್ರ ಭತ್ಯೆ, ವಸತಿ ಗೃಹ ಸೌಲಭ್ಯ ಕಲ್ಪಿಸಬೇಕು. ಜಿಲ್ಲಾವಾರು ವರ್ಗಾವಣೆಗೆ ಅವಕಾಶ ಕೊಡಬೇಕು. ಪಿಪಿಇ ಕಿಟ್ಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.