‘ನಾಲ್ಕು ವಿವಿಧ ಫೇಸ್ಬುಕ್ ಖಾತೆಗಳು ಹಾಗೂ ವಾಟ್ಸ್ಆ್ಯಪ್ ಗ್ರೂಪ್ಗಳ ಅಡ್ಮಿನ್ಗಳ ವಿರುದ್ಧ ಮಾರ್ಕೆಟ್, ತಿಲಕವಾಡಿ, ಗ್ರಾಮೀಣ ಹಾಗೂ ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದೇವೆ. ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಾಕಿ ಶಾಂತಿ, ಸುವ್ಯವಸ್ಥೆ ಕೆಡಿಸಲು ಹುನ್ನಾರ ನಡೆಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು’ ಎಂದು ಡಿಸಿಪಿ ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.