ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ‘ತರಾತುರಿಯಲ್ಲಿ ಚುನಾವಣೆ ಸರಿಯಲ್ಲ. ಕೋವಿಡ್ ಮೂರನೇ ಅಲೆಯ ಭೀತಿ ಆವರಿಸಿರುವ ಸಂದರ್ಭದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿ ಆರೇ ದಿನಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭಿಸುವ ಪ್ರಕ್ರಿಯೆ ಅತ್ಯಂತ ಅಸಮಂಜಸವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸಚಿವ ಸಂಪುಟ ಎರಡು ಬಾರಿ ನಿರ್ಧಾರ ಕೈಗೊಂಡರೂ ಆಯೋಗವು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡು ವೇಳಾಪಟ್ಟಿ ಪ್ರಕಟಿಸಿದಂತಿದೆ’ ಎಂದು ಅಧ್ಯಕ್ಷ ಅಶೋಕ ಚಂದರಗಿ ದೂರಿದ್ದಾರೆ.