ಬೆಳಗಾವಿ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮೊಬೈಲ್ ಆ್ಯಪ್ ಬಳಸಿ ಬೆಳೆ ಸಮೀಕ್ಷೆ ಆರಂಭಿಸಲಾಗಿದ್ದು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಸಾಂಖ್ಯಿಕ ಇಲಾಖೆ ಸಹಯೋಗದಲ್ಲಿ ಪ್ರಗತಿಯಲ್ಲಿದೆ. ಈಗಾಗಲೇ ನಮೂದಿಸಿರುವ ವಿವರಗಳು ತಪ್ಪಾಗಿರುವುದು ಕಂಡುಬಂದಲ್ಲಿ ಆಕ್ಷೇಪಣೆಗಳನ್ನು ರೈತರು ‘ಬೆಳೆ ದರ್ಶಕ’ ಮೊಬೈಲ್ ಫೋನ್ ಆ್ಯಪ್ ಬಳಸಿ ಸಲ್ಲಿಸಬಹುದು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.