‘68.3 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ 427 ಹೆಕ್ಟೇರ್ ಜಮೀನು ಸ್ವಾಧೀನಪಡಿಸಲು ಜ. 3ರಂದು ಅಧಿಸೂಚನೆ ಹೊರಡಿಸಿದೆ. ಆದರೆ, ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಪರಿಹಾರ ನೀಡುವ ಕುರಿತು ಯಾವುದೇ ಮಾಹಿತಿ ಇಲ್ಲ. ಯೋಜನೆಯಿಂದಾಗಿ, ಕೃಷಿಯನ್ನೇ ನಂಬಿಕೊಂಡಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು ಬೀದಿಗೆ ಬೀಳುವ ಸಾಧ್ಯತೆ ಇದೆ’ ಎಂದು ಸದಸ್ಯರು ಕಳವಳ ವ್ಯಕ್ತಪಡಿಸಿದರು.