ಬೆಳಗಾವಿ: ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನ ದೇಸೂರ, ಅಂಕಲಗಿ, ರಾಜಹಂಸಗಡ ಮತ್ತು ನಂದಿಹಳ್ಳಿಯಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
‘ಫಲವತ್ತಾದ ಕೃಷಿ ಭೂಮಿ ಅಲ್ಲಿದೆ. ಕೃಷಿ ಕಾಯಕ ಅವಲಂಬಿಸಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಒಂದು ವೇಳೆ, ರೈಲ್ವೆ ಇಲಾಖೆ ಈ ಯೋಜನೆಗಾಗಿ ನಮ್ಮ ಜಮೀನು ಪಡೆದುಕೊಂಡರೆ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಆದ್ದರಿಂದ ಬೇರೆಡೆ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.