ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ

Last Updated 9 ಸೆಪ್ಟೆಂಬರ್ 2020, 15:06 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನ ದೇಸೂರ, ಅಂಕಲಗಿ, ರಾಜಹಂಸಗಡ ಮತ್ತು ನಂದಿಹಳ್ಳಿಯಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

‘ಫಲವತ್ತಾದ ಕೃಷಿ ಭೂಮಿ ಅಲ್ಲಿದೆ. ಕೃಷಿ ಕಾಯಕ ಅವಲಂಬಿಸಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಒಂದು ವೇಳೆ, ರೈಲ್ವೆ ಇಲಾಖೆ ಈ ಯೋಜನೆಗಾಗಿ ನಮ್ಮ ಜಮೀನು ಪಡೆದುಕೊಂಡರೆ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಆದ್ದರಿಂದ ಬೇರೆಡೆ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಪರಶುರಾಮ ಕೋಲಕಾರ, ಯಲ್ಲಪ್ಪ ಪಾಟೀಲ, ಪರಶುರಾಮ ಜಾಧವ, ಚೇತನ ಪಾಟೀಲ, ಕಿರಣ ಲೊಂಢೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT