<p><strong>ಸವದತ್ತಿ: </strong>ಮುಜರಾಯಿ ಇಲಾಖೆಯ ದತ್ತಿ ಸಮೀಕ್ಷಾ ಅಧಿಕಾರಿ ಕೆ. ಜಯಪ್ರಕಾಶ್ ಅವರು ಸವದತ್ತಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು.</p>.<p>ದೇವಸ್ಥಾನದ ಜಮೀನು, ಜಮೀನಿನ ದಾಖಲೆಗಳ ನಿರ್ವಹಣೆ, ಸಮಚ್ಚಯಗಳ ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಹಾಗೂ ಭಕ್ತರ ಧಾರ್ಮಿಕ ಕೈಂಕರ್ಯಗಳಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಚಿಸಿದರು.</p>.<p>ದೇವಸ್ಥಾನಕ್ಕೆ ಸೇರಿದ ಒಟ್ಟು 1,146 ಎಕರೆ 25 ಗುಂಟೆ ಜಾಗವಿದೆ. ಇದರಲ್ಲಿ ಕಂದಾಯ ಹಾಗೂ ಭೂಮಾಪನಾ ಇಲಾಖೆ ದಾಖಲೆಗಳಲ್ಲಿ ಅಗತ್ಯ ನಡಾವಳಿಗಳನ್ನು ಜರುಗಿಸಿ ಕೆಲವು ಭಾಗದ ಜಮೀನುಗಳ ದಾಖಲೆಗಳನ್ನು ಉನ್ನತೀಕರಿಸಿಕೊಂಡು ನಿರ್ವಹಣೆ ಮಾಡುವಂತೆ ಸೂಚಿಸಿದರು.</p>.<p>ದೇವಾಲಯದಿಂದ 246 ಕೊಠಡಿಗಳ ಅತಿಥಿಗೃಹ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಆದರೆ, ಕೆಲವು ಕಾಮಗಾರಿ 16 ತಿಂಗಳಿಂದ ಬಾಕಿ ಇದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಎಇಇ ಜೊತೆ ಚರ್ಚಿಸಿದರು. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸದಿದ್ದಲ್ಲಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಕೆಆರ್ಐಡಿಎಲ್ನಿಂದ ಬಾಕಿ ಇರುವ 8 ಕಾಮಗಾರಿಗಳ ಗುಣಮಟ್ಟದ ಬಗ್ಗೆ ತಗಾದೆ ಇರುವುದರಿಂದ ಈ ಬಗ್ಗೆ ಗುಣಮಟ್ಟ ಪರೀಕ್ಷಿಸಲು ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ (ಗುಣಮಟ್ಟ ನಿರ್ವಹಣೆ) ಅವರನ್ನು ಕೋರಲು ಧಾರ್ಮಿಕ ದತ್ತಿ ಇಲಾಖೆ ಎಇಇಗೆ ಸೂಚಿಸಿದರು.</p>.<p>ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಹಸಿರೀಕರಣ ನಡೆಸಲು ಪ್ರಸ್ತಾವ ಕಳುಹಿಸಲು ಎಸಿಎಫ್ಗೆ ಕೋರಿದರು.</p>.<p>ಒಟ್ಟು ಆಸ್ತಿ ಮತ್ತು ದಾಖಲೆಗಳ ಕುರಿತು ಪರಿಶೀಲಿಲಿಸಿದರು. ತ್ಯಾಜ್ಯವನ್ನು ದೇವಸ್ಥಾನದ ಹೊರವಲಯಲ್ಲಿ ಸಂಗ್ರಹಿಸಲಾಗುತ್ತಿದ್ದು ನಂತರ ಅದನ್ನು ಪುರಸಭೆ ವ್ಯಾಪ್ತಿಗೆ ಕಳುಹಿಸಲು ಕ್ರಮ ಕೈಗೊಂಡಿರುವುದರ ಮಾಹಿತಿ ಪಡೆದರು. ಪ್ರಗತಿಯಲ್ಲಿರುವ ₹ 138 ಕೋಟಿ ಮೊತ್ತದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ತಹಶೀಲ್ದಾರ್ ಪ್ರಶಾಂತ ಪಾಟೀಲ, ಯರಗಟ್ಟಿ ತಹಶೀಲ್ದಾರ್ ಎಂ.ಎನ್. ಮಠದ, ಪಿಡಬ್ಲ್ಯುಡಿ ಅಧಿಕಾರಿ ಎಚ್.ಎ. ಕದ್ರಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ: </strong>ಮುಜರಾಯಿ ಇಲಾಖೆಯ ದತ್ತಿ ಸಮೀಕ್ಷಾ ಅಧಿಕಾರಿ ಕೆ. ಜಯಪ್ರಕಾಶ್ ಅವರು ಸವದತ್ತಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು.</p>.<p>ದೇವಸ್ಥಾನದ ಜಮೀನು, ಜಮೀನಿನ ದಾಖಲೆಗಳ ನಿರ್ವಹಣೆ, ಸಮಚ್ಚಯಗಳ ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಹಾಗೂ ಭಕ್ತರ ಧಾರ್ಮಿಕ ಕೈಂಕರ್ಯಗಳಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಚಿಸಿದರು.</p>.<p>ದೇವಸ್ಥಾನಕ್ಕೆ ಸೇರಿದ ಒಟ್ಟು 1,146 ಎಕರೆ 25 ಗುಂಟೆ ಜಾಗವಿದೆ. ಇದರಲ್ಲಿ ಕಂದಾಯ ಹಾಗೂ ಭೂಮಾಪನಾ ಇಲಾಖೆ ದಾಖಲೆಗಳಲ್ಲಿ ಅಗತ್ಯ ನಡಾವಳಿಗಳನ್ನು ಜರುಗಿಸಿ ಕೆಲವು ಭಾಗದ ಜಮೀನುಗಳ ದಾಖಲೆಗಳನ್ನು ಉನ್ನತೀಕರಿಸಿಕೊಂಡು ನಿರ್ವಹಣೆ ಮಾಡುವಂತೆ ಸೂಚಿಸಿದರು.</p>.<p>ದೇವಾಲಯದಿಂದ 246 ಕೊಠಡಿಗಳ ಅತಿಥಿಗೃಹ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಆದರೆ, ಕೆಲವು ಕಾಮಗಾರಿ 16 ತಿಂಗಳಿಂದ ಬಾಕಿ ಇದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಎಇಇ ಜೊತೆ ಚರ್ಚಿಸಿದರು. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸದಿದ್ದಲ್ಲಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಕೆಆರ್ಐಡಿಎಲ್ನಿಂದ ಬಾಕಿ ಇರುವ 8 ಕಾಮಗಾರಿಗಳ ಗುಣಮಟ್ಟದ ಬಗ್ಗೆ ತಗಾದೆ ಇರುವುದರಿಂದ ಈ ಬಗ್ಗೆ ಗುಣಮಟ್ಟ ಪರೀಕ್ಷಿಸಲು ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ (ಗುಣಮಟ್ಟ ನಿರ್ವಹಣೆ) ಅವರನ್ನು ಕೋರಲು ಧಾರ್ಮಿಕ ದತ್ತಿ ಇಲಾಖೆ ಎಇಇಗೆ ಸೂಚಿಸಿದರು.</p>.<p>ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಹಸಿರೀಕರಣ ನಡೆಸಲು ಪ್ರಸ್ತಾವ ಕಳುಹಿಸಲು ಎಸಿಎಫ್ಗೆ ಕೋರಿದರು.</p>.<p>ಒಟ್ಟು ಆಸ್ತಿ ಮತ್ತು ದಾಖಲೆಗಳ ಕುರಿತು ಪರಿಶೀಲಿಲಿಸಿದರು. ತ್ಯಾಜ್ಯವನ್ನು ದೇವಸ್ಥಾನದ ಹೊರವಲಯಲ್ಲಿ ಸಂಗ್ರಹಿಸಲಾಗುತ್ತಿದ್ದು ನಂತರ ಅದನ್ನು ಪುರಸಭೆ ವ್ಯಾಪ್ತಿಗೆ ಕಳುಹಿಸಲು ಕ್ರಮ ಕೈಗೊಂಡಿರುವುದರ ಮಾಹಿತಿ ಪಡೆದರು. ಪ್ರಗತಿಯಲ್ಲಿರುವ ₹ 138 ಕೋಟಿ ಮೊತ್ತದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ತಹಶೀಲ್ದಾರ್ ಪ್ರಶಾಂತ ಪಾಟೀಲ, ಯರಗಟ್ಟಿ ತಹಶೀಲ್ದಾರ್ ಎಂ.ಎನ್. ಮಠದ, ಪಿಡಬ್ಲ್ಯುಡಿ ಅಧಿಕಾರಿ ಎಚ್.ಎ. ಕದ್ರಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>