‘ಜಿಲ್ಲಾಸ್ಪತ್ರೆಗೆ ತೆರಳಿ ವೃದ್ಧೆ ಆರೋಗ್ಯ ವಿಚಾರಿಸಲಾಗಿದೆ. ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ನಾಮದೇವ ಬಿಲ್ಕಾರ ಅವರು ಖುದ್ದು ಭೇಟಿ ನೀಡಿದ್ದಾರೆ. ವೃದ್ಧೆಯ ಆರೋಗ್ಯ ಸುಧಾರಿಸಿದ ನಂತರ, ಇಲಾಖೆಯ ವೃದ್ಧಾಶ್ರಮಕ್ಕೆ ಸೇರಿಸಲಾಗುವುದು. ಅವರ ಸಂಬಂಧಿಕರ ಪತ್ತೆಗೆ ಪ್ರಯತ್ನ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎ.ಎಂ.ಬಸವರಾಜ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.