<p><strong>ಬೆಳಗಾವಿ: </strong>ಆಭರಣದ ಅಂಗಡಿ ಮಾಲೀಕಗೆ ಪಿಸ್ತೂಲ್ ತೋರಿಸಿ ಬಂಗಾರ ಸುಲಿಗೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಮಜಗಾವಿಯ ಸಂತ ಜ್ಞಾನೇಶ್ವರ ನಗರದ ವೈಭವ ರಾಜೇಂದ್ರ ಪಾಟೀಲ (29) ಬಂಧಿತ. ಅವರಿಂದ ₹ 3 ಲಕ್ಷ ಮೌಲ್ಯದ ಬಂಗಾರ, ಕಂಟ್ರಿ ಪಿಸ್ತೂಲ್, 3 ಸಜೀವ ಗುಂಡು ಹಾಗೂ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ.</p>.<p>ಹಿಂದವಾಡಿ ಗುಮ್ಮಟಮಾಳದ ಸಚಿನ್ ನಾರಾಯಣ ಬಾಂಡಿವಾಡೇಕರ್ ಈ ಬಗ್ಗೆ ದೂರು ನೀಡಿದ್ದರು. ‘ಜೂನ್ 27ರಂದು ಸಂಜೆ 6.30ಕ್ಕೆ ಹಿಂಡಲಗಾ ರಸ್ತೆಯ ಚಿನ್ನಾಭರಣ ಅಂಗಡಿಗೆ ಬಂದ ಆರೋಪಿಯು ನಕ್ಲೆಸ್ಗಳನ್ನು ಖರೀದಿಸುವುದಾಗಿ ತಿಳಿಸಿ ವೀಕ್ಷಿಸಿದರು. ಒಂದಾದ ನಂತರ ಮತ್ತೊಂದು ಕೇಳಿದರು. ಒಟ್ಟು 4 ನಕ್ಲೆಸ್ಗಳನ್ನು ಜೇಬಿನಲ್ಲಿ ಹಾಕಿಕೊಂಡು, ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿ ಓಡಿ ಹೋಗಿದ್ದರು’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<p>ಈ ಕುರಿತು ಪ್ರಕರಣ ದಾಖಲಿಸಿಕೊಂಡ ಇನ್ಸ್ಪೆಕ್ಟರ್ ಡಿ. ಸಂತೋಷ್ಕುಮಾರ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಆಭರಣದ ಅಂಗಡಿ ಮಾಲೀಕಗೆ ಪಿಸ್ತೂಲ್ ತೋರಿಸಿ ಬಂಗಾರ ಸುಲಿಗೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಮಜಗಾವಿಯ ಸಂತ ಜ್ಞಾನೇಶ್ವರ ನಗರದ ವೈಭವ ರಾಜೇಂದ್ರ ಪಾಟೀಲ (29) ಬಂಧಿತ. ಅವರಿಂದ ₹ 3 ಲಕ್ಷ ಮೌಲ್ಯದ ಬಂಗಾರ, ಕಂಟ್ರಿ ಪಿಸ್ತೂಲ್, 3 ಸಜೀವ ಗುಂಡು ಹಾಗೂ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ.</p>.<p>ಹಿಂದವಾಡಿ ಗುಮ್ಮಟಮಾಳದ ಸಚಿನ್ ನಾರಾಯಣ ಬಾಂಡಿವಾಡೇಕರ್ ಈ ಬಗ್ಗೆ ದೂರು ನೀಡಿದ್ದರು. ‘ಜೂನ್ 27ರಂದು ಸಂಜೆ 6.30ಕ್ಕೆ ಹಿಂಡಲಗಾ ರಸ್ತೆಯ ಚಿನ್ನಾಭರಣ ಅಂಗಡಿಗೆ ಬಂದ ಆರೋಪಿಯು ನಕ್ಲೆಸ್ಗಳನ್ನು ಖರೀದಿಸುವುದಾಗಿ ತಿಳಿಸಿ ವೀಕ್ಷಿಸಿದರು. ಒಂದಾದ ನಂತರ ಮತ್ತೊಂದು ಕೇಳಿದರು. ಒಟ್ಟು 4 ನಕ್ಲೆಸ್ಗಳನ್ನು ಜೇಬಿನಲ್ಲಿ ಹಾಕಿಕೊಂಡು, ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿ ಓಡಿ ಹೋಗಿದ್ದರು’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<p>ಈ ಕುರಿತು ಪ್ರಕರಣ ದಾಖಲಿಸಿಕೊಂಡ ಇನ್ಸ್ಪೆಕ್ಟರ್ ಡಿ. ಸಂತೋಷ್ಕುಮಾರ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>