‘ದೇಶ ಗಂಡಾಂತರದಲ್ಲಿದೆ. ಜನ ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವೇ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಇದೆ. ಇದನ್ನು ಮನಗಂಡು ದೇಣಿಗೆ ನೀಡಿದ್ದೇನೆ. ಯಾರಿಗೆ ಆರ್ಥಿಕ ಸಹಾಯ ಮಾಡುವ ಸಾಮರ್ಥ್ಯ ಇದೆಯೊ ಅವರು ಪುಣ್ಯ ಕಾರ್ಯಕ್ಕೆ ಕೈ ಜೋಡಿಸಬೇಕು. ಇದೇ ನಿಜವಾದ ದೇಶ ಸೇವೆ’ ಎಂದು ಹೇಳಿದ್ದಾರೆ.