<p><strong>ಬೆಳಗಾವಿ:</strong> ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಒಡಿಸ್ಸಾದ ಕಂದಮಾಲ ಜಿಲ್ಲೆಯ ತಿಲಬಂಗಿ ಗ್ರಾಮದ ಅನುಕೂಲಚಂದ್ರ ಮಹೇಂದ್ರ ಕಲ್ಹಾರ (22) ಬಂಧಿತರು. ಅವರು ಮಹಾಂತೇಶ ನಗರ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರಿಂದ ₹ 50ಸಾವಿರ ಮೌಲ್ಯದ 2 ಕೆ.ಜಿ. 60 ಗ್ರಾಂ. ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಬಕಾರಿ ಇನ್ಸ್ಪೆಕ್ಟರ್ ರವೀಂದ್ರ ಬಿ. ಹೊಸಳ್ಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p class="Subhead"><strong>ಮಹಿಳೆ ಮೇಲೆ ಆ್ಯಸಿಡ್ ದಾಳಿ</strong></p>.<p>ರಾಯಬಾಗ: ಪಟ್ಟಣದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಮಹಿಳೆ ಮೇಲೆ ಶುಕ್ರವಾರ ಸಂಜೆ 7ರ ಸುಮಾರಿಗೆ ಆ್ಯಸಿಡ್ ದಾಳಿ ನಡೆದಿದೆ.</p>.<p>ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಆ್ಯಸಿಡ್ ಎರಚಿದ ವ್ಯಕ್ತಿಯು ತಕ್ಷಣ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಒಡಿಸ್ಸಾದ ಕಂದಮಾಲ ಜಿಲ್ಲೆಯ ತಿಲಬಂಗಿ ಗ್ರಾಮದ ಅನುಕೂಲಚಂದ್ರ ಮಹೇಂದ್ರ ಕಲ್ಹಾರ (22) ಬಂಧಿತರು. ಅವರು ಮಹಾಂತೇಶ ನಗರ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರಿಂದ ₹ 50ಸಾವಿರ ಮೌಲ್ಯದ 2 ಕೆ.ಜಿ. 60 ಗ್ರಾಂ. ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಬಕಾರಿ ಇನ್ಸ್ಪೆಕ್ಟರ್ ರವೀಂದ್ರ ಬಿ. ಹೊಸಳ್ಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p class="Subhead"><strong>ಮಹಿಳೆ ಮೇಲೆ ಆ್ಯಸಿಡ್ ದಾಳಿ</strong></p>.<p>ರಾಯಬಾಗ: ಪಟ್ಟಣದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಮಹಿಳೆ ಮೇಲೆ ಶುಕ್ರವಾರ ಸಂಜೆ 7ರ ಸುಮಾರಿಗೆ ಆ್ಯಸಿಡ್ ದಾಳಿ ನಡೆದಿದೆ.</p>.<p>ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಆ್ಯಸಿಡ್ ಎರಚಿದ ವ್ಯಕ್ತಿಯು ತಕ್ಷಣ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>