ಬೆಳಗಾವಿ: ‘ಜಿಲ್ಲೆ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಆಗಿರುವ ಅತಿವೃಷ್ಟಿಯಿಂದ ಸಾರ್ವಜನಿಕ ಆಸ್ತಿಯು ಬಹಳಷ್ಟು ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ಗ್ರಾಮಸ್ಥರು ಬೀದಿಗೆ ಬಂದಿದ್ದಾರೆ. ಹೀಗಾಗಿ, ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದೇನೆ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.