ಶಾಸಕ ಅಭಯ ಪಾಟೀಲ ವಿನಂತಿ ಮೇರೆಗೆ ಎಲ್ ಅಂಡ್ ಟಿ ಕಂಪನಿಯವರು ಘಟಕ ಸ್ಥಾಪಿಸಲು ಮುಂದೆ ಬಂದಿದ್ದಾರೆ. ಆ ಕಂಪನಿಯ ಅಧಿಕಾರಿಗಳು ಹಾಗೂ ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಮೊದಲಾದವರು ಸ್ಥಳ ಪರಿಶೀಲನೆ ನಡೆಸಿದರು. ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿರುವ ಖಾಲಿ ಜಾಗವನ್ನು ವೀಕ್ಷಿಸಿದರು. ಆದಷ್ಟು ಬೇಗ ಘಟಕ ಸ್ಥಾಪಿಸಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕದ್ವಯರು ಸೂಚಿಸಿದರು.