<p><strong>ರಾಂಪುರ</strong>: ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಜಮೀನುಗಳು ಸಂಪೂರ್ಣ ನೀರಲ್ಲಿ ಮುಳುಗಿದ್ದು, ಕಿತ್ತು ಹಾಕಿದ್ದ ಈರುಳ್ಳಿ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.</p>.<p>ಸುಮಾರು 2 ತಾಸು ಸುರಿದ ಮಳೆಯಿಂದ ಜಮೀನುಗಳಲ್ಲಿನ ಒಡ್ಡುಗಳು ತುಂಬಿ ಹರಿದಿವೆ. ಬೆಳೆಗಳೆಲ್ಲ ನೀರಲ್ಲಿ ನಿಂತಿವೆ. ಗುರುವಾರ ಬೆಳಗ್ಗೆ ಸಹಿತ ಹೊಲಗಳಲ್ಲಿ ನೀರು ಹರಿಯುತ್ತಿರುವ ದೃಶ್ಯ ಕಂಡು ಬಂದವು.</p>.<p>ಶಿರೂರ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಕಿತ್ತು ಒಣಗಲು ಹಾಕಿದ್ದ ಈರುಳ್ಳಿ ಬೆಳೆ ನೀರಿನ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿದ್ದು, ಕೆಲವು ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿ ಬೇರೆಯವರ ಹೊಲದಲ್ಲಿ ಬಿದ್ದಿದೆ.</p>.<p>ಬೆನಕಟ್ಟಿ, ಶಿರೂರ, ಮನ್ನಿಕಟ್ಟಿ, ಹಳ್ಳೂರ, ಬೇವೂರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದು, ಕೃಷಿ ಚಟುವಟಿಕೆಗಳೆಲ್ಲ ನಿಂತು ಹೋಗಿವೆ. ಚಕ್ಕಡಿ, ಟ್ರ್ಯಾಕ್ಟರ್ ಸಹ ಜಮೀನುಗಳಲ್ಲಿ ಹೋಗಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ಜೊತೆಗೆ ಹಿಂಗಾರು ಬಿತ್ತನೆಗೂ ಅಡಚಣೆಯಾಗಿದೆ.</p>.<p>ಈಗಾಗಲೇ ಕಿತ್ತು ಹಾಕಿರುವ ಈರುಳ್ಳಿ ಬೆಳೆ ಹಾಗೂ ಇನ್ನೂ ಕಟಾವು ಮಾಡದ ಈರುಳ್ಳಿ ಕೆಲವೆಡೆ ಸಂಪೂರ್ಣವಾಗಿ ನೀರಲ್ಲಿ ನಿಂತಿದ್ದು, ಕೊಳೆಯುವ ಭೀತಿ ರೈತರನ್ನು ಕಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ</strong>: ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಜಮೀನುಗಳು ಸಂಪೂರ್ಣ ನೀರಲ್ಲಿ ಮುಳುಗಿದ್ದು, ಕಿತ್ತು ಹಾಕಿದ್ದ ಈರುಳ್ಳಿ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.</p>.<p>ಸುಮಾರು 2 ತಾಸು ಸುರಿದ ಮಳೆಯಿಂದ ಜಮೀನುಗಳಲ್ಲಿನ ಒಡ್ಡುಗಳು ತುಂಬಿ ಹರಿದಿವೆ. ಬೆಳೆಗಳೆಲ್ಲ ನೀರಲ್ಲಿ ನಿಂತಿವೆ. ಗುರುವಾರ ಬೆಳಗ್ಗೆ ಸಹಿತ ಹೊಲಗಳಲ್ಲಿ ನೀರು ಹರಿಯುತ್ತಿರುವ ದೃಶ್ಯ ಕಂಡು ಬಂದವು.</p>.<p>ಶಿರೂರ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಕಿತ್ತು ಒಣಗಲು ಹಾಕಿದ್ದ ಈರುಳ್ಳಿ ಬೆಳೆ ನೀರಿನ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿದ್ದು, ಕೆಲವು ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿ ಬೇರೆಯವರ ಹೊಲದಲ್ಲಿ ಬಿದ್ದಿದೆ.</p>.<p>ಬೆನಕಟ್ಟಿ, ಶಿರೂರ, ಮನ್ನಿಕಟ್ಟಿ, ಹಳ್ಳೂರ, ಬೇವೂರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದು, ಕೃಷಿ ಚಟುವಟಿಕೆಗಳೆಲ್ಲ ನಿಂತು ಹೋಗಿವೆ. ಚಕ್ಕಡಿ, ಟ್ರ್ಯಾಕ್ಟರ್ ಸಹ ಜಮೀನುಗಳಲ್ಲಿ ಹೋಗಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ಜೊತೆಗೆ ಹಿಂಗಾರು ಬಿತ್ತನೆಗೂ ಅಡಚಣೆಯಾಗಿದೆ.</p>.<p>ಈಗಾಗಲೇ ಕಿತ್ತು ಹಾಕಿರುವ ಈರುಳ್ಳಿ ಬೆಳೆ ಹಾಗೂ ಇನ್ನೂ ಕಟಾವು ಮಾಡದ ಈರುಳ್ಳಿ ಕೆಲವೆಡೆ ಸಂಪೂರ್ಣವಾಗಿ ನೀರಲ್ಲಿ ನಿಂತಿದ್ದು, ಕೊಳೆಯುವ ಭೀತಿ ರೈತರನ್ನು ಕಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>