‘ಎಲ್ಲ ಅತಿಥಿ ಶಿಕ್ಷರು, ಉಪನ್ಯಾಸಕರು, ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಕೋವಿಡ್ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡಬಾರದು. ಎಲ್ಲ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಅವರ ಸೇವೆಗೆ ನಿರ್ದಿಷ್ಟ ವಿಶೇಷ ಅಂಕ ನೀಡುವುದು ಅಥವಾ ವಯೋಮಿತಿ ಏರಿಸುವುದು ಮೊದಲಾದ ಪ್ರಜಾತಾಂತ್ರಿಕ ಪದ್ಧತಿಯನ್ನು ಅನುಷ್ಠಾನಕ್ಕೆ ತರಬೇಕು. ಗೌರವಧನ ಹೆಚ್ಚಿಸಬೇಕು. ವರ್ಷದ 12 ತಿಂಗಳೂ ಗೌರವಧನ ನೀಡಬೇಕು. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ನಮ್ಮನ್ನೂ ಪರಿಗಣಿಸಬೇಕು. ಸೇವಾ ಪ್ರಮಾಣಪತ್ರ ನೀಡಬೇಕು ಮತ್ತು ಗುರುತಿನ ಚೀಟಿ ಕೊಡಬೇಕು’ ಎಂದು ಒತ್ತಾಯಿಸಿದರು.